ಉಡುಪಿ

ನರಸತ್ತ ಕಾಪು ಪುರಸಭೆ ಪ್ರಖ್ಯಾತ ಹೋಟೆಲುಗಳ ತ್ಯಾಜ್ಯ ನೀರು ಒಳಚರಂಡಿ ಸೇರುತ್ತಿದೆ : vishwanews24

ನರಸತ್ತ ಕಾಪು ಪುರಸಭೆ ಪ್ರಖ್ಯಾತ ಹೋಟೆಲುಗಳ ತ್ಯಾಜ್ಯ ನೀರು ಒಳಚರಂಡಿ ಸೇರುತ್ತಿದೆ : vishwanews24

ಚರಂಡಿಯ ಇಕ್ಕೆಲದಲ್ಲಿ ಕಾಂಡೋಮ್ ತೇಲುತ್ತಿದೆ,ಮೀನುಮಾಂಸ ತ್ಯಾಜ್ಯ ಹೊರ ಬರುತ್ತಿದೆ,ಬೀದಿ ನಾಯಿ ಕಾಯುತ್ತಿದೆ!!

ಅಧಿಕಾರ ವರ್ಗ ಮಾತ್ರ ಬೆಚ್ಚಗೆ ಸೊಳ್ಳೆ ಪರದೆ ಹಾಕಿ ಮಲಗಿದೆ..!!!

ಕಾಪು : ಇಲ್ಲಿನ ಪುರಸಭೆಯ ಅಧಿಕಾರಿಗಳಿಗೆ ಯಾಕೋ‌ ಹವಾನಿಯಂತ್ರಿತ ಕೊಠಡಿ ಬಿಟ್ಟು ಹೊರಗೆ ಬರಲು ಮನಸ್ಸಿಲ್ಲ ಕಾಣುತ್ತಿದೆ ಹಾಗಾಗಿ ಪ್ರಖ್ಯಾತ ಹೋಟೆಲ್‌ ಲಾಡ್ಜುಗಳ ತ್ಯಾಜ್ಯ ನೀರು ಹದಗೆಟ್ಟ ಒಳಚರಂಡಿಯಲ್ಲಿ ಹರಿದು ಶೈಕ್ಷಣಿಕ ಬೀಡು, ದೇಗುಲದ ನಾಡು,ಪ್ರವಾಸೋದ್ಯಮ ಕೇಂದ್ರವಾದ ಕಾಪು ನಗರ ಗಬ್ಬು ನಾರುತ್ತಿದೆ..

ಒಳಚರಂಡಿಯಲ್ಲಿನ ನೀರು ಹೊರಬಂದು ಕಾಂಡೋಮ್ ಗಳು ಮೀನಿನಂತೆ ತೇಲಾಡುತ್ತಿದೆ,ಮೂಳೆ ಮಾಂಸಗಳ ತ್ಯಾಜ್ಯ ಚರಂಡಿಯ ಇಕ್ಕೆಲಗಳಲ್ಲಿ ತಲೆ ಎತ್ತಿ ನಾನು ಹೊರಗೆ ಬರಲೇ ಅನ್ನುತ್ತಿದೆ ಇಷ್ಟೆಲ್ಲಾ ಆದರೂ ಮಾತ್ರ ಕಾಪು ಪುರಸಭೆಯ ಅಧಿಕಾರಿಗಳು ತಾವೂ ಕುಳಿತಿರುವ ಖುರ್ಚಿಗೆ ಕಾವು ನೀಡುತ್ತಿದ್ದಾರೆ.

ತ್ಯಾಜ್ಯ ನಿರ್ವಹಣೆಯೊಂದು ಬಿಟ್ಟರೆ ಕಾಪು ಪುರಸಭೆ ಏನು ಮಾಡುತ್ತಿದೆಂಬ ಪ್ರಶ್ನೆಗೆ ಉತ್ತರ ಇದುವರೆಗೂ ಸಿಕ್ಕಿಲ್ಲ,ಹೋಟೆಲುಗಳು ಅನಾಚರಕ್ಕೆ ಕೊನೆಯಿಲ್ಲ ,ಪುರಸಭೆಯದಂತೂ ಸುದ್ದಿಯೇ ಇಲ್ಲದಂತಾಗಿದೆ.

ಕತ್ತಲೆಯಾದರೇ ಸಾಕು ಇಡೀ ಕಾಪು ನಗರ,ವೇಗದೂತ ಬಸ್ಸು ನಿಲ್ದಾಣದ ಸುತ್ತಲೂ ಗಬ್ಬು ವಾಸನೆ ಮೂಗಿಗೆ ಬಡಿದು ವಾಸನೆ ಗ್ರಹಿಸುವ ನರವೇ ಸತ್ತು ಹೋಗಿದೆ,ಸೊಳ್ಳೆಗಳು ರಾಜರೋಷವಾಗಿ ರಕ್ತ ಹೀರುತ್ತಿದೆ,ಬೀದಿ ನಾಯಿಗಳು ಚರಂಡಿಯ ಇಕ್ಕೆಲದಲ್ಲಿ ಹೊರಬರುವ ಮೂಳೆ ಮಾಂಸಕ್ಕೆ ಕಾಯುತ್ತಿದ್ದೆ ಅಧಿಕಾರ ವರ್ಗ ಬೆಚ್ಚಗೆ ಮನೆಯಲ್ಲಿ ಮಲಗಿದ್ದಾರೆ.

ವಿಪರ್ಯಾಸವೆಂದರೆ ಕೋಟಿಗಟ್ಟಲೆ ಹಣ ಪುರಸಭೆಗೆ ತಂದು ಹಾಕಿದ್ದೇವೆ ಅನ್ನುತ್ತಿದ್ದಾರೆ ಕಾಂಗ್ರೆಸ್ ಬಿಜೆಪಿ ನಾಯಕರುಗಳು ಆ‌ ಕೋಟಿಯಲ್ಲಿ ಈ ಲೆಕ್ಕಾಚಾರ ತಪ್ಪಿ ಹೋಗಿದೆಯೋ ಅಥವಾ ಗಬ್ಬು ನಾತದ ಲೆಕ್ಕಾಚಾರ ಗೊತ್ತಿದ್ದರೂ ಅಧಿಕಾರಿಗಳು “ಕುರುಡು ಕಾಂಚನಾ” ಕ್ಕೆ ಬಲಿಯಾಗುತ್ತಿದ್ದರೋ ಗೊತ್ತಿಲ್ಲ ಒಟ್ಟಾರೆ ಕಾಪು ನಗರ ವಾಸನೆಗೀಡಾಗಿದೆ.

ಬ್ಯುರೋ ರಿಪೋರ್ಟ್ : ವಿಶ್ವನ್ಯೂಸ್24

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

5 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

6 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

7 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

7 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

8 hours ago