ಬೆಳಗಾವಿ : ಮಳೆಯಿಂದ ಸೇತುವೆ ಹಾನಿಗೊಳಗಾಗಿತ್ತು. ಆದರೂ ಕಿರಿದಾದ ಸೇತುವೆಯ ಮೇಲೆ ಚಾಲಕರು ಲಾರಿ ಚಲಾಯಿಸುತ್ತಿದ್ದರು. ಇದನ್ನು ನೋಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನನ್ನು ತರಾಟೆ ತೆಗೆದುಕೊಂಡಿದ್ದಾರೆ.
ಖಾನಾಪುರ ಪಟ್ಟಣದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನಿಗೆ ಬೈದು ವಾಪಸ್ ಕಳುಹಿಸಿದ್ದಾರೆ. ಇಷ್ಟು ದೊಡ್ಡ ಗಾಡಿ ಕಿರಿದಾದ ಸೇತುವೆ ಮೇಲೆ ಬಂದರೆ ಸಣ್ಣ ವಾಹನಗಳು ಹೇಗೆ ಓಡಾಡುತ್ತವೆ. ನೀನು ಒಂದು ದಿನ ಅರ್ಧ ಗಂಟೆ ಬಂದು ಹೋಗುತ್ತೀಯಾ, ನಂತರ ಇಲ್ಲಿನ ಹಾಗೂ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶದಿಂದ ಹೇಳಿದರು.
ಖಾನಾಪುರ-ಪಣಡಿ ಸಂಪರ್ಕ ಸೇತುವೆ ಹಾಳಾಗಿತ್ತು. ಹೀಗಾಗಿ ಮರು ನಿರ್ಮಾಣ ಯೋಜನೆಗೆ ಶಾಸಕ ಅಂಜಲಿ ನಿಂಬಾಳ್ಕರ್ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಭಾರಿ ವಾಹನ ನಿಷೇಧದ ಬೋರ್ಡ್ ಇದ್ದರೂ, ಲಾರಿ ಚಾಲಕನೊಬ್ಬ ಸೇತುವೆ ಮೇಲೆ ಚಲಾಯಿಸಲು ಯತ್ನಿಸಿದನು.
ಇದನ್ನು ಸ್ಥಳದಲ್ಲಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ಗಮನಿಸಿದ್ದೇ ತಡೇ, ಸೇತುವೆ ಬಳಿ ತೆರಳಿ ಲಾರಿಯ ಮುಂದೆ ನಿಂತು ಚಾಲಕನಿಗೆ ಬೋರ್ಡ್ ನೋಡದೇ ದುರಸ್ತಿಯಾಗಿರುವ ಸೇತುವೆಯ ಮೇಲೆ ಲಾರಿ ಚಲಾಯಿಸಲು ಪ್ರಯತ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಈ ಸೇತುವೆ ಮೇಲೆ ಚಲಾಯಿಸುವಂತಿಲ್ಲ ಎಂದು ಖಡಕ್ ಆಗೇ ಸೂಚಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…