ಬೆಳಗಾವಿ : ಮಳೆಯಿಂದ ಸೇತುವೆ ಹಾನಿಗೊಳಗಾಗಿತ್ತು. ಆದರೂ ಕಿರಿದಾದ ಸೇತುವೆಯ ಮೇಲೆ ಚಾಲಕರು ಲಾರಿ ಚಲಾಯಿಸುತ್ತಿದ್ದರು. ಇದನ್ನು ನೋಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನನ್ನು ತರಾಟೆ ತೆಗೆದುಕೊಂಡಿದ್ದಾರೆ.
ಖಾನಾಪುರ ಪಟ್ಟಣದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನಿಗೆ ಬೈದು ವಾಪಸ್ ಕಳುಹಿಸಿದ್ದಾರೆ. ಇಷ್ಟು ದೊಡ್ಡ ಗಾಡಿ ಕಿರಿದಾದ ಸೇತುವೆ ಮೇಲೆ ಬಂದರೆ ಸಣ್ಣ ವಾಹನಗಳು ಹೇಗೆ ಓಡಾಡುತ್ತವೆ. ನೀನು ಒಂದು ದಿನ ಅರ್ಧ ಗಂಟೆ ಬಂದು ಹೋಗುತ್ತೀಯಾ, ನಂತರ ಇಲ್ಲಿನ ಹಾಗೂ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶದಿಂದ ಹೇಳಿದರು.
ಖಾನಾಪುರ-ಪಣಡಿ ಸಂಪರ್ಕ ಸೇತುವೆ ಹಾಳಾಗಿತ್ತು. ಹೀಗಾಗಿ ಮರು ನಿರ್ಮಾಣ ಯೋಜನೆಗೆ ಶಾಸಕ ಅಂಜಲಿ ನಿಂಬಾಳ್ಕರ್ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಭಾರಿ ವಾಹನ ನಿಷೇಧದ ಬೋರ್ಡ್ ಇದ್ದರೂ, ಲಾರಿ ಚಾಲಕನೊಬ್ಬ ಸೇತುವೆ ಮೇಲೆ ಚಲಾಯಿಸಲು ಯತ್ನಿಸಿದನು.
ಇದನ್ನು ಸ್ಥಳದಲ್ಲಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ಗಮನಿಸಿದ್ದೇ ತಡೇ, ಸೇತುವೆ ಬಳಿ ತೆರಳಿ ಲಾರಿಯ ಮುಂದೆ ನಿಂತು ಚಾಲಕನಿಗೆ ಬೋರ್ಡ್ ನೋಡದೇ ದುರಸ್ತಿಯಾಗಿರುವ ಸೇತುವೆಯ ಮೇಲೆ ಲಾರಿ ಚಲಾಯಿಸಲು ಪ್ರಯತ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಈ ಸೇತುವೆ ಮೇಲೆ ಚಲಾಯಿಸುವಂತಿಲ್ಲ ಎಂದು ಖಡಕ್ ಆಗೇ ಸೂಚಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…