Featured

ನೆರೆಯಿಂದ ಹಾನಿಯಾಗಿದ್ದ ಸೇತುವೆ ಮೇಲೆಯೇ ಭಾರಿ ವಾಹನ ಚಲಾಯಿಸಿಕೊಂಡು ಬಂದ ಲಾರಿ ಚಾಲಕನ ತರಾಟೆಗೆ ತೆಗೆದೊಂಡ ಶಾಸಕಿ ಅಂಜಲಿ ನಿಂಬಾಳ್ಕರ್ -Vishwanews24

ಬೆಳಗಾವಿ : ಮಳೆಯಿಂದ ಸೇತುವೆ ಹಾನಿಗೊಳಗಾಗಿತ್ತು. ಆದರೂ ಕಿರಿದಾದ ಸೇತುವೆಯ ಮೇಲೆ ಚಾಲಕರು ಲಾರಿ ಚಲಾಯಿಸುತ್ತಿದ್ದರು. ಇದನ್ನು ನೋಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನನ್ನು ತರಾಟೆ ತೆಗೆದುಕೊಂಡಿದ್ದಾರೆ.

ಖಾನಾಪುರ ಪಟ್ಟಣದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನಿಗೆ ಬೈದು ವಾಪಸ್ ಕಳುಹಿಸಿದ್ದಾರೆ. ಇಷ್ಟು ದೊಡ್ಡ ಗಾಡಿ ಕಿರಿದಾದ ಸೇತುವೆ ಮೇಲೆ ಬಂದರೆ ಸಣ್ಣ ವಾಹನಗಳು ಹೇಗೆ ಓಡಾಡುತ್ತವೆ. ನೀನು ಒಂದು ದಿನ ಅರ್ಧ ಗಂಟೆ ಬಂದು ಹೋಗುತ್ತೀಯಾ, ನಂತರ ಇಲ್ಲಿನ ಹಾಗೂ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶದಿಂದ ಹೇಳಿದರು.

ಖಾನಾಪುರ-ಪಣಡಿ ಸಂಪರ್ಕ ಸೇತುವೆ ಹಾಳಾಗಿತ್ತು. ಹೀಗಾಗಿ ಮರು ನಿರ್ಮಾಣ ಯೋಜನೆಗೆ ಶಾಸಕ ಅಂಜಲಿ ನಿಂಬಾಳ್ಕರ್ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಭಾರಿ ವಾಹನ ನಿಷೇಧದ ಬೋರ್ಡ್ ಇದ್ದರೂ, ಲಾರಿ ಚಾಲಕನೊಬ್ಬ ಸೇತುವೆ ಮೇಲೆ ಚಲಾಯಿಸಲು ಯತ್ನಿಸಿದನು.

ಇದನ್ನು ಸ್ಥಳದಲ್ಲಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ಗಮನಿಸಿದ್ದೇ ತಡೇ, ಸೇತುವೆ ಬಳಿ ತೆರಳಿ ಲಾರಿಯ ಮುಂದೆ ನಿಂತು ಚಾಲಕನಿಗೆ ಬೋರ್ಡ್ ನೋಡದೇ ದುರಸ್ತಿಯಾಗಿರುವ ಸೇತುವೆಯ ಮೇಲೆ ಲಾರಿ ಚಲಾಯಿಸಲು ಪ್ರಯತ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಈ ಸೇತುವೆ ಮೇಲೆ ಚಲಾಯಿಸುವಂತಿಲ್ಲ ಎಂದು ಖಡಕ್ ಆಗೇ ಸೂಚಿಸಿದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

24 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

38 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

44 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

58 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 day ago