ನರೇಂದ್ರಮೋದಿ ಕಠಿಣ ಪರಿಶ್ರಮಿ ಅವರ ಎದುರು ರಾಹುಲ್ ಗಾಂಧಿಗೆ ಅವಕಾಶವಿಲ್ಲ : ಇತಿಹಾಸಕಾರ ರಾಮಚಂದ್ರ ಗುಹಾ -Vishwanews24

ಕೋಯಿಕ್ಕೋಡ್: ವಂಶ ರಾಜಕಾರಣದ ಐದನೇ ತಲೆಮಾರಿನ ನಾಯಕ ರಾಹುಲ್ ಗಾಂಧಿಗೆ ಕಠಿಣ ಪರಿಶ್ರಮಿ ನರೇಂದ್ರ ಮೋದಿ ಎದುರು ರಾಜಕಾರಣದಲ್ಲಿ ಅವಕಾಶವಿಲ್ಲ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಹೇಳಿದ್ದಾರೆ. ರಾಹುಲ್ ಅವರನ್ನು ಸಂಸತ್‌ಗೆ ಆಯ್ಕೆ ಮಾಡುವ ಮೂಲಕ ಕೇರಳವು ಹಾನಿಕಾರಕ ಕೆಲಸ ಮಾಡಿದೆ ಎಂದೂ ಅವರು ಹೇಳಿದ್ದಾರೆ.

ಕೇರಳ ಸಾಹಿತ್ಯ ಉತ್ಸವದ ಎರಡನೇ ದಿನವಾದ ಶುಕ್ರವಾರ ‘ದೇಶಪ್ರೇಮ ಮತ್ತು ತೀವ್ರಗಾಮಿ ದೇಶಭಕ್ತಿ’ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಚಳವಳಿಯ ಕಾಲದಲ್ಲಿ ಅದ್ಭುತ ಪಕ್ಷವಾಗಿದ್ದ ಕಾಂಗ್ರೆಸ್ ಈಗ ಒಂದು ಕುಟುಂಬ ಸಂಸ್ಥೆಯಾಗಿರುವುದು ಹಿಂದುತ್ವದ ಮತ್ತು ತೀವ್ರಗಾಮಿ ದೇಶಭಕ್ತಿಯ ಆರೋಹಣಕ್ಕೆ ಕಾರಣವಾಗಿದೆ’ ಎಂದು ಹೇಳಿದ್ದಾರೆ.

ಮೋದಿ ಕಠಿಣ ಪರಿಶ್ರಮಿ: ‘ನರೇಂದ್ರ ಮೋದಿ ಅವರಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಅವರು ರಾಹುಲ್ ಗಾಂಧಿಯಂತಲ್ಲ. ಅವರು ಸ್ವಯಂ ವರ್ಚಸ್ಸು ಬೆಳೆಸಿಕೊಂಡವರು. 15 ವರ್ಷ ರಾಜ್ಯದ ಆಡಳಿತ ನಡೆಸಿದ ಅನುಭವ ಉಳ್ಳವರು. ಅವರು ಕಠಿಣ ಪರಿಶ್ರಮಿ ಮಾತ್ರವಲ್ಲದೆ ರಜೆ ಪಡೆದು ಯುರೋಪ್‌ಗೆ ಹೋಗುವವರಲ್ಲ. ನನ್ನನ್ನು ನಂಬಿ. ಇದಾವುದನ್ನೂ ನಾನು ತಮಾಷೆಗೆ ಹೇಳುತ್ತಿಲ್ಲ’ ಎಂದೂ ಗುಹಾ ಹೇಳಿದ್ದಾರೆ.

‘ವೈಯಕ್ತಿಕವಾಗಿ ನನಗೆ ರಾಹುಲ್ ಗಾಂಧಿ ಬಗ್ಗೆ ಯಾವುದೇ ವಿರೋಧವಿಲ್ಲ. ಅವರೊಬ್ಬ ಯೋಗ್ಯ ಮತ್ತು ಉತ್ತಮ ನಡತೆಯ ವ್ಯಕ್ತಿ. ಆದರೆ, ವಂಶ ರಾಜಕಾರಣದ ಐದನೇ ತಲೆಮಾರಿನ ನಾಯಕನನ್ನು ಯುವ ಭಾರತವು ಒಪ್ಪುತ್ತಿಲ್ಲ. ನೀವು ಮಲಯಾಳಿಗರು ರಾಹುಲ್ ಗಾಂಧಿಯನ್ನು ಸಂಸತ್‌ಗೆ ಆಯ್ಕೆ ಮಾಡುವ ತಪ್ಪನ್ನು 2024ರಲ್ಲಿಯೂ ಮಾಡಿದ್ದೇ ಆದಲ್ಲಿ ನರೇಂದ್ರ ಮೋದಿಯವರಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ’ ಎಂದು ಗುಹಾ ಹೇಳಿದ್ದಾರೆ.‘ಕೇರಳಿಗರಾದ ನೀವು ಅನೇಕ ಅದ್ಭುತ ಕೆಲಸಗಳನ್ನು ಮಾಡಿದ್ದೀರಿ. ಆದರೆ ರಾಹುಲ್ ಗಾಂಧಿ ಅವರನ್ನು ಸಂಸತ್‌ಗೆ ಆರಿಸಿ ಕಳುಹಿಸುವ ಮೂಲಕ ಹಾನಿಕಾರಕ ಕೆಲಸ ಮಾಡಿದ್ದೀರಿ’ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago