ನರೇಂದ್ರಮೋದಿ ಕಠಿಣ ಪರಿಶ್ರಮಿ ಅವರ ಎದುರು ರಾಹುಲ್ ಗಾಂಧಿಗೆ ಅವಕಾಶವಿಲ್ಲ : ಇತಿಹಾಸಕಾರ ರಾಮಚಂದ್ರ ಗುಹಾ -Vishwanews24

ಕೋಯಿಕ್ಕೋಡ್: ವಂಶ ರಾಜಕಾರಣದ ಐದನೇ ತಲೆಮಾರಿನ ನಾಯಕ ರಾಹುಲ್ ಗಾಂಧಿಗೆ ಕಠಿಣ ಪರಿಶ್ರಮಿ ನರೇಂದ್ರ ಮೋದಿ ಎದುರು ರಾಜಕಾರಣದಲ್ಲಿ ಅವಕಾಶವಿಲ್ಲ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಹೇಳಿದ್ದಾರೆ. ರಾಹುಲ್ ಅವರನ್ನು ಸಂಸತ್‌ಗೆ ಆಯ್ಕೆ ಮಾಡುವ ಮೂಲಕ ಕೇರಳವು ಹಾನಿಕಾರಕ ಕೆಲಸ ಮಾಡಿದೆ ಎಂದೂ ಅವರು ಹೇಳಿದ್ದಾರೆ.

ಕೇರಳ ಸಾಹಿತ್ಯ ಉತ್ಸವದ ಎರಡನೇ ದಿನವಾದ ಶುಕ್ರವಾರ ‘ದೇಶಪ್ರೇಮ ಮತ್ತು ತೀವ್ರಗಾಮಿ ದೇಶಭಕ್ತಿ’ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಚಳವಳಿಯ ಕಾಲದಲ್ಲಿ ಅದ್ಭುತ ಪಕ್ಷವಾಗಿದ್ದ ಕಾಂಗ್ರೆಸ್ ಈಗ ಒಂದು ಕುಟುಂಬ ಸಂಸ್ಥೆಯಾಗಿರುವುದು ಹಿಂದುತ್ವದ ಮತ್ತು ತೀವ್ರಗಾಮಿ ದೇಶಭಕ್ತಿಯ ಆರೋಹಣಕ್ಕೆ ಕಾರಣವಾಗಿದೆ’ ಎಂದು ಹೇಳಿದ್ದಾರೆ.

ಮೋದಿ ಕಠಿಣ ಪರಿಶ್ರಮಿ: ‘ನರೇಂದ್ರ ಮೋದಿ ಅವರಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಅವರು ರಾಹುಲ್ ಗಾಂಧಿಯಂತಲ್ಲ. ಅವರು ಸ್ವಯಂ ವರ್ಚಸ್ಸು ಬೆಳೆಸಿಕೊಂಡವರು. 15 ವರ್ಷ ರಾಜ್ಯದ ಆಡಳಿತ ನಡೆಸಿದ ಅನುಭವ ಉಳ್ಳವರು. ಅವರು ಕಠಿಣ ಪರಿಶ್ರಮಿ ಮಾತ್ರವಲ್ಲದೆ ರಜೆ ಪಡೆದು ಯುರೋಪ್‌ಗೆ ಹೋಗುವವರಲ್ಲ. ನನ್ನನ್ನು ನಂಬಿ. ಇದಾವುದನ್ನೂ ನಾನು ತಮಾಷೆಗೆ ಹೇಳುತ್ತಿಲ್ಲ’ ಎಂದೂ ಗುಹಾ ಹೇಳಿದ್ದಾರೆ.

‘ವೈಯಕ್ತಿಕವಾಗಿ ನನಗೆ ರಾಹುಲ್ ಗಾಂಧಿ ಬಗ್ಗೆ ಯಾವುದೇ ವಿರೋಧವಿಲ್ಲ. ಅವರೊಬ್ಬ ಯೋಗ್ಯ ಮತ್ತು ಉತ್ತಮ ನಡತೆಯ ವ್ಯಕ್ತಿ. ಆದರೆ, ವಂಶ ರಾಜಕಾರಣದ ಐದನೇ ತಲೆಮಾರಿನ ನಾಯಕನನ್ನು ಯುವ ಭಾರತವು ಒಪ್ಪುತ್ತಿಲ್ಲ. ನೀವು ಮಲಯಾಳಿಗರು ರಾಹುಲ್ ಗಾಂಧಿಯನ್ನು ಸಂಸತ್‌ಗೆ ಆಯ್ಕೆ ಮಾಡುವ ತಪ್ಪನ್ನು 2024ರಲ್ಲಿಯೂ ಮಾಡಿದ್ದೇ ಆದಲ್ಲಿ ನರೇಂದ್ರ ಮೋದಿಯವರಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ’ ಎಂದು ಗುಹಾ ಹೇಳಿದ್ದಾರೆ.‘ಕೇರಳಿಗರಾದ ನೀವು ಅನೇಕ ಅದ್ಭುತ ಕೆಲಸಗಳನ್ನು ಮಾಡಿದ್ದೀರಿ. ಆದರೆ ರಾಹುಲ್ ಗಾಂಧಿ ಅವರನ್ನು ಸಂಸತ್‌ಗೆ ಆರಿಸಿ ಕಳುಹಿಸುವ ಮೂಲಕ ಹಾನಿಕಾರಕ ಕೆಲಸ ಮಾಡಿದ್ದೀರಿ’ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…

2 hours ago

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

2 hours ago

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…

2 hours ago

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

2 hours ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

2 hours ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

3 hours ago