Featured

ನರೇಂದ್ರ ಮೋದಿಯವರಿಗಾಗಿ ಮತ ಹಾಕಿ , ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ’:ಸದಾನಂದ ಗೌಡ -Vishwanews24

ಬೆಂಗಳೂರು,  ‘ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದ್ದು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ’ ಎಂದು ಡಿ.ವಿ.ಸದಾನಂದ ಗೌಡ ಅವರು ಜನರಲ್ಲಿ ಮನವಿ ಮಾಡಿದರು.

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೋಮವಾರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ನಾಗದೇವನಹಳ್ಳಿ ಎರಡನೇ ಹಂತದ ಜ್ಞಾನ ಭಾರತಿ ಬಿಡಿಎ ಲೇಔಟ್ ನಲ್ಲಿರುವ ಕೆವಿ ಆರ್ಕಿಡ್ಸ್ ಅಪಾರ್ಟ್ಮೆಂಟ್ ನಾಗರಿಕರೊಂದಿಗೆ ಸಂವಾದ ನಡೆಸಿದ ಅವರು, ‘ನೀವು ಸದಾನಂದ ಗೌಡರಿಗಾಗಿ ಮತ ಹಾಕಬೇಡಿ, ನರೇಂದ್ರ ಮೋದಿಯವರಿಗಾಗಿ ಮತ ಹಾಕಿ.’ ಎಂದು ಕೋರಿದರು.

ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಸರಣಿ ರಜೆಗಳಿವೆ ಎಂದು ಪ್ರವಾಸಕ್ಕೆ ಅಥವಾ ಹುಟ್ಟೂರಿಗೆ ತೆರಳಬೇಡಿ. ಮತದಾನ ಮಾಡಿದ ನಂತರ ನಿಮ್ಮ ಕಾರ್ಯಕ್ರಮಗಳನ್ನು ಹಾಕಿಕೊಳ್ಳಿ. ದೇಶದಲ್ಲಿ ಮತ್ತೊಮ್ಮೆ ಮೋದಿ ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದ್ದು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ ಎಂದು ಹೇಳಿದ್ದಾರೆ.

ಈ ಬಾರಿಯೂ ತಮಗೆ ಮತ ನೀಡಿ ಪುನರಾಯ್ಕೆ ಮಾಡಬೇಕು ಎಂದು ಜನರಲ್ಲಿ ಮನವಿ ಮಾಡಿದರು. ಏಪ್ರಿಲ್ 18ರಂದು ಬೆಂಗಳೂರು ಉತ್ತರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಕೃಷ್ಣ ಬೈರೇಗೌಡ ಅವರು ಕಣದಲ್ಲಿದ್ದಾರೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

10 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago