ನರೇಂದ್ರ ಮೋದಿಯವರು ಓರ್ವ ಕಠಿಣ ಪ್ರಧಾನಿ, ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ : ಡೊನಾಲ್ಡ್​ ಟ್ರಂಪ್ -Vishwanews24

ಅಹಮದಾಬಾದ್​: ಅಮರಿಕ ಭಾರತವನ್ನು ಪ್ರೀತಿಸುತ್ತದೆ. ಅಮೆರಿಕ ಭಾರತವನ್ನು ಗೌರವಿಸುತ್ತದೆ ಮತ್ತು ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ ಎಂದು ಡೊನಾಲ್ಡ್​ ಟ್ರಂಪ್ ಹೇಳಿದರು.

ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ನಮಸ್ತೆ ಟ್ರಂಪ್​ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಬಳಿಕ ಮಾತನಾಡಿ ಅವರು, ಭಾರತದ ಬಗ್ಗೆ ತಮಗೆ ಯಾವಾಗಲೂ ಪ್ರೀತಿಯಿದೆ ಎಂದು ಹೇಳಿದರು. ಅಷ್ಟೇ ಅಲ್ಲದೆ ಭಾರತದೊಂದಿಗೆ 3 ಬಿಲಿಯನ್​ ಯುಎಸ್ ಡಾಲರ್​ಗಳಷ್ಟು(2,1545 ಲಕ್ಷ ಕೋಟಿ ರೂ.) ಮೊತ್ತದ ರಕ್ಷಣಾ ಒಪ್ಪಂದವನ್ನು ಘೋಷಿಸಿದರು. ನಾಳೆ ಈ ಅತಿದೊಡ್ಡ ಒಪ್ಪಂದಕ್ಕೆ ನಾವಿಬ್ಬರೂ ಸಹಿ ಹಾಕಲಿದ್ದೇವೆ ಎಂಬುದನ್ನು ಟ್ರಂಪ್ ಹೇಳಿದರು.

ಭಾರತದ ಈ ಆತಿಥ್ಯವನ್ನು ನಾವು ಸದಾಕಾಲ ನೆನಪಿನಲ್ಲಿ ಇಟ್ಟುಕೊಳ್ಳುತ್ತೇವೆ. ಭಾರತಕ್ಕೆ ನಮ್ಮ ಹೃದಯದಲ್ಲಿ ವಿಶೇಷ ಸ್ಥಾನ ಇದೆ ಎಂದು ಹೇಳಿದ ಟ್ರಂಪ್ ನರೇಂದ್ರ ಮೋದಿಯವರನ್ನು ತುಂಬುಹೃದಯದಿಂದ ಹೊಗಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರಾಟ ಮಾಡುತ್ತಿದ್ದರು. ಅವರೊಬ್ಬ ಚಹಾ ವಾಲಾ ಎಂಬುದು ಎಲ್ಲರಿಗೂ ಗೊತ್ತು. ಅನೇಕಾನೇಕ ಜನರ ಪ್ರೀತಿಯನ್ನು ಅವರು ಗಳಿಸಿಕೊಂಡಿದ್ದಾರೆ. ಆದರೆ ಒಂದು ವಿಷಯ ಹೇಳುತ್ತೇನೆ. ನರೇಂದ್ರ ಮೋದಿಯವರು ಓರ್ವ ಕಠಿಣ ಪ್ರಧಾನಿ ಎಂದು ಹೇಳಿದರು.

ಪಿಎಂ ಮೋದಿ ಬರೀ ಗುಜರಾತ್​ನ ಹೆಮ್ಮೆಯಲ್ಲ. ಕಠಿಣ ಪರಿಶ್ರಮ ಮತ್ತು ನಿಷ್ಠೆಗೆ ಮೋದಿಯವರು ಅದ್ಭುತ ಉದಾಹರಣೆ. ಭಾರತೀಯರು ಮನಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಅವರು ಸಾಕ್ಷಿ ಎಂದು ಮೋದಿಯವರನ್ನು ಹೊಗಳಿದರು.

ರಕ್ಷಣಾ ಕ್ಷೇತ್ರದಲ್ಲಿ ಯುಎಸ್​ ಮತ್ತು ಭಾರತದ ಪರಸ್ಪರ ಸಹಕಾರವನ್ನು ಬಲಗೊಳಿಸಿಕೊಳ್ಳುವುದು ನಮ್ಮ ಉದ್ದೇಶ. ಜಗತ್ತಿನಲ್ಲಿಯೇ ಅತ್ಯಂತ ಬಲಶಾಲಿಯಾದ, ಅತ್ಯುತ್ತಮವಾದ ರಕ್ಷಣಾ ಸಾಧನಗಳನ್ನು, ಮಿಲಿಟರಿ ಉಪಕರಣಗಳನ್ನು ಭಾರತಕ್ಕೆ ನೀಡುವ ಬಗ್ಗೆ ಯುಎಸ್​ ಚಿಂತನೆ ನಡೆಸುತ್ತಿದೆ. ಭಾರತ ಮತ್ತು ಯುಎಸ್ ಜತೆಯಾಗಿ ಅತ್ಯುತ್ತಮ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತೇವೆ ಎಂದು ಹೇಳಿದರು.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

13 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

16 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

16 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

16 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

16 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

17 hours ago