ನರೇಂದ್ರ ಮೋದಿಯವರು ಓರ್ವ ಕಠಿಣ ಪ್ರಧಾನಿ, ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ : ಡೊನಾಲ್ಡ್​ ಟ್ರಂಪ್ -Vishwanews24

ಅಹಮದಾಬಾದ್​: ಅಮರಿಕ ಭಾರತವನ್ನು ಪ್ರೀತಿಸುತ್ತದೆ. ಅಮೆರಿಕ ಭಾರತವನ್ನು ಗೌರವಿಸುತ್ತದೆ ಮತ್ತು ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ ಎಂದು ಡೊನಾಲ್ಡ್​ ಟ್ರಂಪ್ ಹೇಳಿದರು.

ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ನಮಸ್ತೆ ಟ್ರಂಪ್​ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಬಳಿಕ ಮಾತನಾಡಿ ಅವರು, ಭಾರತದ ಬಗ್ಗೆ ತಮಗೆ ಯಾವಾಗಲೂ ಪ್ರೀತಿಯಿದೆ ಎಂದು ಹೇಳಿದರು. ಅಷ್ಟೇ ಅಲ್ಲದೆ ಭಾರತದೊಂದಿಗೆ 3 ಬಿಲಿಯನ್​ ಯುಎಸ್ ಡಾಲರ್​ಗಳಷ್ಟು(2,1545 ಲಕ್ಷ ಕೋಟಿ ರೂ.) ಮೊತ್ತದ ರಕ್ಷಣಾ ಒಪ್ಪಂದವನ್ನು ಘೋಷಿಸಿದರು. ನಾಳೆ ಈ ಅತಿದೊಡ್ಡ ಒಪ್ಪಂದಕ್ಕೆ ನಾವಿಬ್ಬರೂ ಸಹಿ ಹಾಕಲಿದ್ದೇವೆ ಎಂಬುದನ್ನು ಟ್ರಂಪ್ ಹೇಳಿದರು.

ಭಾರತದ ಈ ಆತಿಥ್ಯವನ್ನು ನಾವು ಸದಾಕಾಲ ನೆನಪಿನಲ್ಲಿ ಇಟ್ಟುಕೊಳ್ಳುತ್ತೇವೆ. ಭಾರತಕ್ಕೆ ನಮ್ಮ ಹೃದಯದಲ್ಲಿ ವಿಶೇಷ ಸ್ಥಾನ ಇದೆ ಎಂದು ಹೇಳಿದ ಟ್ರಂಪ್ ನರೇಂದ್ರ ಮೋದಿಯವರನ್ನು ತುಂಬುಹೃದಯದಿಂದ ಹೊಗಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರಾಟ ಮಾಡುತ್ತಿದ್ದರು. ಅವರೊಬ್ಬ ಚಹಾ ವಾಲಾ ಎಂಬುದು ಎಲ್ಲರಿಗೂ ಗೊತ್ತು. ಅನೇಕಾನೇಕ ಜನರ ಪ್ರೀತಿಯನ್ನು ಅವರು ಗಳಿಸಿಕೊಂಡಿದ್ದಾರೆ. ಆದರೆ ಒಂದು ವಿಷಯ ಹೇಳುತ್ತೇನೆ. ನರೇಂದ್ರ ಮೋದಿಯವರು ಓರ್ವ ಕಠಿಣ ಪ್ರಧಾನಿ ಎಂದು ಹೇಳಿದರು.

ಪಿಎಂ ಮೋದಿ ಬರೀ ಗುಜರಾತ್​ನ ಹೆಮ್ಮೆಯಲ್ಲ. ಕಠಿಣ ಪರಿಶ್ರಮ ಮತ್ತು ನಿಷ್ಠೆಗೆ ಮೋದಿಯವರು ಅದ್ಭುತ ಉದಾಹರಣೆ. ಭಾರತೀಯರು ಮನಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಅವರು ಸಾಕ್ಷಿ ಎಂದು ಮೋದಿಯವರನ್ನು ಹೊಗಳಿದರು.

ರಕ್ಷಣಾ ಕ್ಷೇತ್ರದಲ್ಲಿ ಯುಎಸ್​ ಮತ್ತು ಭಾರತದ ಪರಸ್ಪರ ಸಹಕಾರವನ್ನು ಬಲಗೊಳಿಸಿಕೊಳ್ಳುವುದು ನಮ್ಮ ಉದ್ದೇಶ. ಜಗತ್ತಿನಲ್ಲಿಯೇ ಅತ್ಯಂತ ಬಲಶಾಲಿಯಾದ, ಅತ್ಯುತ್ತಮವಾದ ರಕ್ಷಣಾ ಸಾಧನಗಳನ್ನು, ಮಿಲಿಟರಿ ಉಪಕರಣಗಳನ್ನು ಭಾರತಕ್ಕೆ ನೀಡುವ ಬಗ್ಗೆ ಯುಎಸ್​ ಚಿಂತನೆ ನಡೆಸುತ್ತಿದೆ. ಭಾರತ ಮತ್ತು ಯುಎಸ್ ಜತೆಯಾಗಿ ಅತ್ಯುತ್ತಮ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತೇವೆ ಎಂದು ಹೇಳಿದರು.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago