ಬೆಂಗಳೂರು,: ನಾನು ಕಂಡಂತೆ ಲಾಲ್ ಬಹದ್ದೂರ್ ಶಾಸ್ತ್ರಿಯವರ ನಂತರ ಉತ್ತಮ, ಮೋಸ್ಟ್ ಹಾರ್ಡ್ ವರ್ಕಿಂಗ್ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ, ಅವರು ಪ್ರಧಾನಿಯಾಗುವುದು ನಿಶ್ಚಿತ. ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಸಾಕಷ್ಟು ಪ್ರಬುದ್ಧ ಅನುಭವಿ ನಾಯಕರಿದ್ದಾರೆ. ಆದರೆ, ಅವರು ಕಾಂಗ್ರೆಸ್ ಅಧ್ಯಕ್ಷರಿಗೆ ಸರಿಯಾದ ಸಲಹೆ ಕೊಡುತ್ತಿಲ್ಲ ಎನಿಸುತ್ತದೆ. ನಾನಂತೂ ಕಾಂಗ್ರೆಸ್ ಬಿಟ್ಟ ಕ್ಷಣದಿಂದಲೇ ಆ ಪಕ್ಷದ ಬಗ್ಗೆ ಚಿಂತೆ ನಡೆಸುವುದನ್ನು ಬಿಟ್ಟಿದ್ದೇನೆ ಎಂದು ತಿಳಿಸಿದರು.
ಸಾಕಷ್ಟೂ ಹವ್ಯಾಸಿ ಪ್ರಿಯ ಪ್ರಧಾನಿಗಳು ಇರುತ್ತಾರೆ. ಆದರೆ, ನರೇಂದ್ರ ಮೋದಿಗೆ ಯಾವ ಹವ್ಯಾಸಗಳೂ ಇಲ್ಲ. ಹೋಗಲಿ ಮಕ್ಕಳು, ಮೊಮ್ಮಕ್ಕಳು ಎನ್ನುವ ಚಿಂತೆಯೂ ಇಲ್ಲ. ಒಬ್ಬ ಸೋದರ ಇದ್ದಾರೆ. ಆದರೆ, ನಗಣ್ಯ. ಹಾಗಾಗಿ ನರೇಂದ್ರ ಮೋದಿ ನಿರಾಳವಾಗಿದ್ದಾರೆ ಎಂದು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಬಾಹುಬಲದಿಂದ ನರೇಂದ್ರ ಮೋದಿ ಪ್ರದಾನಿಯಾಗದಂತೆ ತಡೆಯುತ್ತಾರೆ, ಅದಕ್ಕೆ ಅಡ್ಡಿ ಮಾಡುತ್ತಾರೆ ಎಂಬ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ನಿಶ್ಚಿತ. ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…