ಬೆಂಗಳೂರು,: ನಾನು ಕಂಡಂತೆ ಲಾಲ್ ಬಹದ್ದೂರ್ ಶಾಸ್ತ್ರಿಯವರ ನಂತರ ಉತ್ತಮ, ಮೋಸ್ಟ್ ಹಾರ್ಡ್ ವರ್ಕಿಂಗ್ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ, ಅವರು ಪ್ರಧಾನಿಯಾಗುವುದು ನಿಶ್ಚಿತ. ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಸಾಕಷ್ಟು ಪ್ರಬುದ್ಧ ಅನುಭವಿ ನಾಯಕರಿದ್ದಾರೆ. ಆದರೆ, ಅವರು ಕಾಂಗ್ರೆಸ್ ಅಧ್ಯಕ್ಷರಿಗೆ ಸರಿಯಾದ ಸಲಹೆ ಕೊಡುತ್ತಿಲ್ಲ ಎನಿಸುತ್ತದೆ. ನಾನಂತೂ ಕಾಂಗ್ರೆಸ್ ಬಿಟ್ಟ ಕ್ಷಣದಿಂದಲೇ ಆ ಪಕ್ಷದ ಬಗ್ಗೆ ಚಿಂತೆ ನಡೆಸುವುದನ್ನು ಬಿಟ್ಟಿದ್ದೇನೆ ಎಂದು ತಿಳಿಸಿದರು.
ಸಾಕಷ್ಟೂ ಹವ್ಯಾಸಿ ಪ್ರಿಯ ಪ್ರಧಾನಿಗಳು ಇರುತ್ತಾರೆ. ಆದರೆ, ನರೇಂದ್ರ ಮೋದಿಗೆ ಯಾವ ಹವ್ಯಾಸಗಳೂ ಇಲ್ಲ. ಹೋಗಲಿ ಮಕ್ಕಳು, ಮೊಮ್ಮಕ್ಕಳು ಎನ್ನುವ ಚಿಂತೆಯೂ ಇಲ್ಲ. ಒಬ್ಬ ಸೋದರ ಇದ್ದಾರೆ. ಆದರೆ, ನಗಣ್ಯ. ಹಾಗಾಗಿ ನರೇಂದ್ರ ಮೋದಿ ನಿರಾಳವಾಗಿದ್ದಾರೆ ಎಂದು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಬಾಹುಬಲದಿಂದ ನರೇಂದ್ರ ಮೋದಿ ಪ್ರದಾನಿಯಾಗದಂತೆ ತಡೆಯುತ್ತಾರೆ, ಅದಕ್ಕೆ ಅಡ್ಡಿ ಮಾಡುತ್ತಾರೆ ಎಂಬ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ನಿಶ್ಚಿತ. ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…