Featured

ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಕಿತ್ತೊಗೆಯಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಲು ಕಾಂಗ್ರೆಸ್ ಕರೆ

ಮಹಾರಾಷ್ಟ್ರ ಸೇವಾಗ್ರಾಮ  : ವಿಭಜನಕಾರಿ ರಾಜಕೀಯ ಮತ್ತು ದ್ವೇಷ ಮತ್ತು ಹಿಂಸೆಯ ಸಿದ್ಧಾಂತ ಅನುಸರಿಸುತ್ತಿರುವ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೆಸೆಯಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಸೇವಾಗ್ರಾಮದ ಮಹಾದೇವ ಭವನದಿಂದ ಗಾಂಧೀಜಿಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಕರೆ ನೀಡಿದೆ.

ಇಲ್ಲಿಂದ 1942ರಲ್ಲಿ ಕಾಂಗ್ರೆಸ್ ಪಕ್ಷ ಬ್ರಿಟಿಷರ ವಿರುದ್ಧ ಭಾರತ ಬಿಟ್ಟು ತೊಲಗಿ ಚಳವಳಿಗೆ ಕರೆ ನೀಡಿತ್ತು.

ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಬೂಟಾಟಿಕೆ ಪ್ರದರ್ಶಿಸುತ್ತಿದ್ದು, ಚುನಾವಣಾ ಲಾಭಕ್ಕಾಗಿ ಮಹಾತ್ಮಗಾಂಧೀಜಿಯವರ ಪರಂಪರೆಯನ್ನು ಸ್ವಾಧೀನಪಡಿಸಿಕೊಂಡಿವೆ ಎಂಬ ನಿರ್ಣಯವನ್ನು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

“ಮೋದಿ ಸರ್ಕಾರ ವಿಭಜನಕಾರಿ ರಾಜಕೀಯ ಅನುಸರಿಸುತ್ತಿದ್ದು, ದ್ವೇಷ ಮತ್ತು ಹಿಂಸೆಯನ್ನು ಹರಡುತ್ತಿದೆ” ಎಂದು ನಿರ್ಣಯದಲ್ಲಿ ಆಪಾದಿಸಲಾಗಿದೆ. ಇಂಥ ವಾತಾವರಣ ಹಾಗೂ ಕಾರಣಗಳು ಗಾಂಧೀಜಿಯವರ ಹತ್ಯೆಗೂ ಕಾರಣವಾಗಿತ್ತು ಎಂದು ವಿವರಿಸಿದೆ.

ಭಾರತದ ಯೋಚನಾ ಲಹರಿ, ಅದರ ಆತ್ಮ ಹಾಗೂ ದೇಹಕ್ಕೆ ಗಾಂಧೀಜಿಯವರ ಕೊಡುಗೆ ಅಪಾರ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಯವರ ಜೈ ಜವಾನ್ ಜೈಕಿಸಾನ್ ಘೋಷಣೆ ಕೇವಲ ಘೋಷಣೆಯಾಗಿರದೇ ಅದು ಜೀವನ ವಿಧಾನವಾಗಿತ್ತು ಎಂದು ಸಭೆಯಲ್ಲಿ ಬಣ್ಣಿಸಲಾಯಿತು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡ ಗುಲಾಂ ನಬಿ ಆಝಾದ್ ಮತ್ತಿತರರು ಭಾಗವಹಿಸಿದ್ದರು..

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

1 hour ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

1 hour ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago