ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.
ನಾನು ದೇಶಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದೇನೆ. ನಾನು ಕಠಿಣ ಪರಿಶ್ರಮ ಪಡುವ ವ್ಯಕ್ತಿಯಾಗಿದ್ದು, ಕಠಿಣ ಪರಿಶ್ರಮ ಪಡುವ ವ್ಯಕ್ತಿಗಳನ್ನು ನಾನು ಇಷ್ಟ ಪಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಕಠಿಣ ಪರಿಶ್ರಮ ಪಡುವ ವ್ಯಕ್ತಿ. ಹೀಗಾಗಿ ಇವರ ಜೊತೆ ಸೇರಿಕೊಂಡು ದೇಶಕ್ಕಾಗಿ ಕೆಲಸ ಮಾಡಬೇಕೆಂಬ ಆಸೆಯಿದೆ ಎಂದು ಹೇಳಿದರು.
ಹರ್ಯಾಣ ಮೂಲದ ಸೈನಾ ನೆಹ್ವಾಲ್ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಯಿದೆ. ದೆಹಲಿ ಚುನಾವಣೆ ಫೆ.8 ರಂದು ನಡೆಯಲಿದೆ.
ವಿಶ್ವದ ಮಾಜಿ ನಂಬರ್ ಒನ್ ಆಟಗಾರ್ತಿ ಸೈನಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2016 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗಿತ್ತು.
ಒಟ್ಟು 24 ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ಸೈನಾ ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…