ಮಂಗಳೂರು: ನಳಿನ್ ಕುಮಾರ್ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, “ಈ ಸರ್ಕಾರದಲ್ಲಿ ಹೇಳೋರಿಲ್ಲ ಕೇಳೋರಿಲ್ಲ, ನಿಜ ಹೇಳಬೇಕಾದ್ರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ. ವರ್ಗಾವಣೆ ದಂಧೆ ಬಿಟ್ಟರೆ, ಆಡಳಿತದಲ್ಲಿ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ಭೀಕರ ಪ್ರವಾಹ ಬಂದಿದ್ದರೂ ಸಂತ್ರಸ್ತರಿಗೆ ಸೂಕ್ತ ಪರಿಹಾರದ ನೀಡುವ ಕೆಲಸ ಆಗುತ್ತಿಲ್ಲ.ಇದರೊಂದಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿದ್ದೂ, ದಿನನಿತ್ಯ ಕೊಲೆ ಸುಲಿಗೆಗಳು ನಡೆಯುತ್ತಿದೆ. ಬಿಜೆಪಿಯವರು ಅಪರೇಷನ್ ಕಮಲ ಬಿಟ್ಟರೆ ಬೇರೇನೂ ಕೆಲಸ ಮಾಡಲ್ಲ. ಇದಕ್ಕಾಗಿ ದೇಶದಲ್ಲಿ ಇವರು ಭ್ರಷ್ಟಾಚಾರ ನಡೆಸಿರುವ ದುಡ್ಡನ್ನು ಬಳಸಿಕೊಳ್ಳುತ್ತಾರೆ. ಐಟಿ-ಇಡಿ ಬಿಟ್ಟು ಬೆದರಿಸೋದು, ಹಾಗೂ ಅಪರೇಷನ್ ಕಮಲ ನಡೆಸೋದು ಬಿಟ್ಟರೆ ಬಿಜೆಪಿಗರಿಗೆ ಬೇರೇನೂ ಗೊತ್ತಿಲ್ಲ” ಎಂದು ಕಿಡಿಕಾರಿದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…