ಮಂಗಳೂರು: ನಳಿನ್ ಕುಮಾರ್ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, “ಈ ಸರ್ಕಾರದಲ್ಲಿ ಹೇಳೋರಿಲ್ಲ ಕೇಳೋರಿಲ್ಲ, ನಿಜ ಹೇಳಬೇಕಾದ್ರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ. ವರ್ಗಾವಣೆ ದಂಧೆ ಬಿಟ್ಟರೆ, ಆಡಳಿತದಲ್ಲಿ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ಭೀಕರ ಪ್ರವಾಹ ಬಂದಿದ್ದರೂ ಸಂತ್ರಸ್ತರಿಗೆ ಸೂಕ್ತ ಪರಿಹಾರದ ನೀಡುವ ಕೆಲಸ ಆಗುತ್ತಿಲ್ಲ.ಇದರೊಂದಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿದ್ದೂ, ದಿನನಿತ್ಯ ಕೊಲೆ ಸುಲಿಗೆಗಳು ನಡೆಯುತ್ತಿದೆ. ಬಿಜೆಪಿಯವರು ಅಪರೇಷನ್ ಕಮಲ ಬಿಟ್ಟರೆ ಬೇರೇನೂ ಕೆಲಸ ಮಾಡಲ್ಲ. ಇದಕ್ಕಾಗಿ ದೇಶದಲ್ಲಿ ಇವರು ಭ್ರಷ್ಟಾಚಾರ ನಡೆಸಿರುವ ದುಡ್ಡನ್ನು ಬಳಸಿಕೊಳ್ಳುತ್ತಾರೆ. ಐಟಿ-ಇಡಿ ಬಿಟ್ಟು ಬೆದರಿಸೋದು, ಹಾಗೂ ಅಪರೇಷನ್ ಕಮಲ ನಡೆಸೋದು ಬಿಟ್ಟರೆ ಬಿಜೆಪಿಗರಿಗೆ ಬೇರೇನೂ ಗೊತ್ತಿಲ್ಲ” ಎಂದು ಕಿಡಿಕಾರಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…