ಬೆಂಗಳೂರು: ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಅನಗತ್ಯ ಆರೋಪ ಮಾಡುತ್ತಿದ್ದು, ಅವರು ದಲಿತರು, ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಹೇಳಿದ್ದಾರೆ.
ಇನ್ನು ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುತ್ತಿರಾ ಮತ್ತು ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ ಎಂದು ನಳಿನ್ ಕುಮಾರ್ ಕಟೀಲ್ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…