Featured

ನಳಿನ್ ಕುಮಾರ್ ಕಟೀಲ್ ಬಯಕೆಯಂತೆ ಬಿಜೆಪಿಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಇದು ಅತ್ಯಂತ ಸೂಕ್ತ ಅವಕಾಶ :  ದಕ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ -Vishwanews24

ನಳಿನ್ ಕುಮಾರ್ ಕಟೀಲ್ ಬಯಕೆಯಂತೆ  ಬಿಜೆಪಿಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಇದು ಅತ್ಯಂತ ಸೂಕ್ತ ಅವಕಾಶ :  ದಕ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ -Vishwanews24

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಹುದಿನಗಳ ಬಯಕೆಯಂತೆ ರಾಜ್ಯದಲ್ಲಿ ಬಿಜೆಪಿಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಇದು ಅತ್ಯಂತ ಸೂಕ್ತ ಅವಕಾಶವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯಹರೀಶ್ ಕುಮಾರ್ ಹೇಳಿದ್ದಾರೆ.

ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ತಮ್ಮ ಮನದಾಳದ ಬಯಕೆಯನ್ನು ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚಿಗೆ ವ್ಯಕ್ತಪಡಸಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ನಳಿನ್ ಕುಮಾರ್ ಕಟೀಲ್ ಶಿಫಾರಸು ಮಾಡಿದ್ದರು. ಕಾಂಗ್ರೆಸ್ ಪಕ್ಷ ಧೀಮಂತ ಮುಖಂಡ ಖರ್ಗೆ ಅವರ ಮೇಲೆ ಪ್ರೀತಿ ವ್ಯಕ್ತ ಪಡಿಸಿರುವುದನ್ನು ಸ್ವಾಗತಿಸುವುತ್ತೇವೆ. ಖರ್ಗೆ ಹಿರಿಯ ಕಾಂಗ್ರೆಸ್ ಮುಖಂಡರು. ಸದ್ಯ ಬಿಜೆಪಿ ಅಧಿಕಾರದಲ್ಲಿ ಇರುವುದರಿಂದ ದಲಿತ ಬಿಜೆಪಿ ಮುಖಂಡರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಸದವಕಾಶ.

ಸದ್ಯದಲ್ಲೇ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂಬ ಸುದ್ದಿ ಬರುತ್ತಿದೆ ನಳಿನ್ ಕುಮಾರ್ ಬಿಜೆಪಿಯ ರಾಜ್ಯ ಘಟಕ ಅಧ್ಯಕ್ಷರೂ ದೆಹಲಿಯಲ್ಲಿ ಹೆಚ್ಚಿನ ಪ್ರಭಾವ ಹೊಂದಿರುವ ಮುಖಂಡರೂ ಆಗಿರುವುದರಿಂದ ದಲಿತರೊಬ್ಬರನ್ನು ಮುಖ್ಯ ಮಂತ್ರಿ ಮಾಡುವುದು ಸುಲಭವಾಗಲಿದೆ ಎಂದು ಹರೀಶ್ ಕುಮಾರ್ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಪ್ರಭಾವಿ ಮತ್ತು ಹಿರಿಯ ದಲಿತ ಮುಖಂಡರು ಅನೇಕ ಮಂದಿ ಇದ್ದಾರೆ. ನಳಿನ್ ಕುಮಾರ್ ಮತ್ತು ಬಿಜೆಪಿ ಪಕ್ಷಕ್ಕೆ ಇದೊಂದು ಸುವರ್ಣಾವಕಾಶ ಎಂದವರು ಹೇಳಿದ್ದಾರೆ.

ನಳಿನ್ ಕುಮಾರ್ ಕಾಂಗ್ರೆಸ್ ಮುಖಂಡರಿಗೆ ಪುಕ್ಕಟೆ ಸಲಹೆ ನೀಡುವ ಬದಲು ಈಗ ದೊರೆತಿರುವ ಅವಕಾಶವನ್ನು ಸದುಪಯೋಗ ಮಾಡಿಕೊಂಡು ದಲಿತರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತಾಗಲಿ ಎಂದು ಹರೀಶ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago