ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಹುದಿನಗಳ ಬಯಕೆಯಂತೆ ರಾಜ್ಯದಲ್ಲಿ ಬಿಜೆಪಿಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಇದು ಅತ್ಯಂತ ಸೂಕ್ತ ಅವಕಾಶವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯಹರೀಶ್ ಕುಮಾರ್ ಹೇಳಿದ್ದಾರೆ.
ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ತಮ್ಮ ಮನದಾಳದ ಬಯಕೆಯನ್ನು ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚಿಗೆ ವ್ಯಕ್ತಪಡಸಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ನಳಿನ್ ಕುಮಾರ್ ಕಟೀಲ್ ಶಿಫಾರಸು ಮಾಡಿದ್ದರು. ಕಾಂಗ್ರೆಸ್ ಪಕ್ಷ ಧೀಮಂತ ಮುಖಂಡ ಖರ್ಗೆ ಅವರ ಮೇಲೆ ಪ್ರೀತಿ ವ್ಯಕ್ತ ಪಡಿಸಿರುವುದನ್ನು ಸ್ವಾಗತಿಸುವುತ್ತೇವೆ. ಖರ್ಗೆ ಹಿರಿಯ ಕಾಂಗ್ರೆಸ್ ಮುಖಂಡರು. ಸದ್ಯ ಬಿಜೆಪಿ ಅಧಿಕಾರದಲ್ಲಿ ಇರುವುದರಿಂದ ದಲಿತ ಬಿಜೆಪಿ ಮುಖಂಡರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಸದವಕಾಶ.
ಸದ್ಯದಲ್ಲೇ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂಬ ಸುದ್ದಿ ಬರುತ್ತಿದೆ ನಳಿನ್ ಕುಮಾರ್ ಬಿಜೆಪಿಯ ರಾಜ್ಯ ಘಟಕ ಅಧ್ಯಕ್ಷರೂ ದೆಹಲಿಯಲ್ಲಿ ಹೆಚ್ಚಿನ ಪ್ರಭಾವ ಹೊಂದಿರುವ ಮುಖಂಡರೂ ಆಗಿರುವುದರಿಂದ ದಲಿತರೊಬ್ಬರನ್ನು ಮುಖ್ಯ ಮಂತ್ರಿ ಮಾಡುವುದು ಸುಲಭವಾಗಲಿದೆ ಎಂದು ಹರೀಶ್ ಕುಮಾರ್ ಹೇಳಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಪ್ರಭಾವಿ ಮತ್ತು ಹಿರಿಯ ದಲಿತ ಮುಖಂಡರು ಅನೇಕ ಮಂದಿ ಇದ್ದಾರೆ. ನಳಿನ್ ಕುಮಾರ್ ಮತ್ತು ಬಿಜೆಪಿ ಪಕ್ಷಕ್ಕೆ ಇದೊಂದು ಸುವರ್ಣಾವಕಾಶ ಎಂದವರು ಹೇಳಿದ್ದಾರೆ.
ನಳಿನ್ ಕುಮಾರ್ ಕಾಂಗ್ರೆಸ್ ಮುಖಂಡರಿಗೆ ಪುಕ್ಕಟೆ ಸಲಹೆ ನೀಡುವ ಬದಲು ಈಗ ದೊರೆತಿರುವ ಅವಕಾಶವನ್ನು ಸದುಪಯೋಗ ಮಾಡಿಕೊಂಡು ದಲಿತರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತಾಗಲಿ ಎಂದು ಹರೀಶ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…