ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಆಗಮಿಸಿದ್ದ ವರನ ಗೆಳೆಯರು 5 ಲೀಟರ್ ಪೆಟ್ರೋಲ್ ಅನ್ನು ದಂಪತಿಗೆ ಉಡುಗೊರೆಯಾಗಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ದೇಶದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಅಧಿಕವಾಗಿದ್ದರಿಂದ ಸ್ನೇಹಿತರು ನವದಂಪತಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ ಎನ್ನಲಾಗಿದೆ.
ವೇದಿಕೆಯ ಮೇಲೆ ನಿಂತಿದ್ದ ವಧು-ವರಿಗೆ ಅತಿಥಿಗಳು ಶುಭಾಶಯವನ್ನು ತಿಳಿಸುತ್ತಿದ್ದರು. ಈ ವೇಳೆ ಅವರ ಸ್ನೇಹಿತರು ಒಟ್ಟಾಗಿ ಬಂದು 5 ಲೀಟರ್ ನ ಪೆಟ್ರೋಲ್ ಕ್ಯಾನೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಸ್ನೇಹಿತರು ಗಿಫ್ಟ್ ಕೊಟ್ಟಾಗ ನಗುತ್ತಲೇ ವಧು-ವರ ಸ್ವೀಕರಿಸಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದರೆಲ್ಲರು ನಕ್ಕಿದ್ದಾರೆ. ಅಲ್ಲದೇ ಕೆಲವರು ಗಿಫ್ಟ್ ಕೊಡುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಆಗಿದ್ದು, ಸದ್ಯ ಎಲ್ಲೆಲ್ಲೂ ಹರಿದಾಡುತ್ತಿದೆ.
ವಿದ್ಯಾರ್ಥಿ ಪ್ರಭು ಮೊದಲಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶದಾದ್ಯಂತ ಇಂಧನ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸಲು ಇದೊಂದು ಪ್ರಯತ್ನವಾಗಿದೆ. ಇಂಧನ ಬೆಲೆಗಳು ದೇಶಾದ್ಯಂತ ತೀವ್ರವಾಗಿ ಏರುತ್ತಿವೆ. ಹಾಗಾಗಿ ವರನ ಸ್ನೇಹಿತರಲ್ಲಿ ಕೆಲವರು ಪೆಟ್ರೋಲ್ ನನ್ನು ದಂಪತಿಗೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದರು. ಜೊತೆಗೆ ಈ ಮೂಲಕ ಬೆಲೆಬಾಳುವ ಉತ್ಪನ್ನದ ಕುರಿತು ಜನರನ್ನು ಎಚ್ಚರಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 85.15 ರೂ. ತಲುಪಿದೆ. ಇದು ರಾಜ್ಯದಲ್ಲಿಯೇ ಅಧಿಕವಾಗಿದೆ. ಪೆಟ್ರೋಲ್ ವೆಚ್ಚದಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಸರ್ಕಾರ ಈ ವಿಚಾರದಲ್ಲಿ ಗಮನಹರಿಸಬೇಕು ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…