Featured

ನವದಂಪತಿಗೆ 5 ಲೀ. ಪೆಟ್ರೋಲ್ ಗಿಫ್ಟ್

ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಆಗಮಿಸಿದ್ದ ವರನ ಗೆಳೆಯರು 5 ಲೀಟರ್ ಪೆಟ್ರೋಲ್ ಅನ್ನು ದಂಪತಿಗೆ ಉಡುಗೊರೆಯಾಗಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ದೇಶದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಅಧಿಕವಾಗಿದ್ದರಿಂದ ಸ್ನೇಹಿತರು ನವದಂಪತಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ ಎನ್ನಲಾಗಿದೆ.

ವೇದಿಕೆಯ ಮೇಲೆ ನಿಂತಿದ್ದ ವಧು-ವರಿಗೆ ಅತಿಥಿಗಳು ಶುಭಾಶಯವನ್ನು ತಿಳಿಸುತ್ತಿದ್ದರು. ಈ ವೇಳೆ ಅವರ ಸ್ನೇಹಿತರು ಒಟ್ಟಾಗಿ ಬಂದು 5 ಲೀಟರ್ ನ ಪೆಟ್ರೋಲ್ ಕ್ಯಾನೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಸ್ನೇಹಿತರು ಗಿಫ್ಟ್ ಕೊಟ್ಟಾಗ ನಗುತ್ತಲೇ ವಧು-ವರ ಸ್ವೀಕರಿಸಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದರೆಲ್ಲರು ನಕ್ಕಿದ್ದಾರೆ. ಅಲ್ಲದೇ ಕೆಲವರು ಗಿಫ್ಟ್ ಕೊಡುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಆಗಿದ್ದು, ಸದ್ಯ ಎಲ್ಲೆಲ್ಲೂ ಹರಿದಾಡುತ್ತಿದೆ.

ವಿದ್ಯಾರ್ಥಿ ಪ್ರಭು ಮೊದಲಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶದಾದ್ಯಂತ ಇಂಧನ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸಲು ಇದೊಂದು ಪ್ರಯತ್ನವಾಗಿದೆ. ಇಂಧನ ಬೆಲೆಗಳು ದೇಶಾದ್ಯಂತ ತೀವ್ರವಾಗಿ ಏರುತ್ತಿವೆ. ಹಾಗಾಗಿ ವರನ ಸ್ನೇಹಿತರಲ್ಲಿ ಕೆಲವರು ಪೆಟ್ರೋಲ್ ನನ್ನು ದಂಪತಿಗೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದರು. ಜೊತೆಗೆ ಈ ಮೂಲಕ ಬೆಲೆಬಾಳುವ ಉತ್ಪನ್ನದ ಕುರಿತು ಜನರನ್ನು ಎಚ್ಚರಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 85.15 ರೂ. ತಲುಪಿದೆ. ಇದು ರಾಜ್ಯದಲ್ಲಿಯೇ ಅಧಿಕವಾಗಿದೆ. ಪೆಟ್ರೋಲ್ ವೆಚ್ಚದಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಸರ್ಕಾರ ಈ ವಿಚಾರದಲ್ಲಿ ಗಮನಹರಿಸಬೇಕು ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

 

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago