Featured

ನವದಂಪತಿಗೆ 5 ಲೀ. ಪೆಟ್ರೋಲ್ ಗಿಫ್ಟ್

ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಆಗಮಿಸಿದ್ದ ವರನ ಗೆಳೆಯರು 5 ಲೀಟರ್ ಪೆಟ್ರೋಲ್ ಅನ್ನು ದಂಪತಿಗೆ ಉಡುಗೊರೆಯಾಗಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ದೇಶದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಅಧಿಕವಾಗಿದ್ದರಿಂದ ಸ್ನೇಹಿತರು ನವದಂಪತಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ ಎನ್ನಲಾಗಿದೆ.

ವೇದಿಕೆಯ ಮೇಲೆ ನಿಂತಿದ್ದ ವಧು-ವರಿಗೆ ಅತಿಥಿಗಳು ಶುಭಾಶಯವನ್ನು ತಿಳಿಸುತ್ತಿದ್ದರು. ಈ ವೇಳೆ ಅವರ ಸ್ನೇಹಿತರು ಒಟ್ಟಾಗಿ ಬಂದು 5 ಲೀಟರ್ ನ ಪೆಟ್ರೋಲ್ ಕ್ಯಾನೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಸ್ನೇಹಿತರು ಗಿಫ್ಟ್ ಕೊಟ್ಟಾಗ ನಗುತ್ತಲೇ ವಧು-ವರ ಸ್ವೀಕರಿಸಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದರೆಲ್ಲರು ನಕ್ಕಿದ್ದಾರೆ. ಅಲ್ಲದೇ ಕೆಲವರು ಗಿಫ್ಟ್ ಕೊಡುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಆಗಿದ್ದು, ಸದ್ಯ ಎಲ್ಲೆಲ್ಲೂ ಹರಿದಾಡುತ್ತಿದೆ.

ವಿದ್ಯಾರ್ಥಿ ಪ್ರಭು ಮೊದಲಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶದಾದ್ಯಂತ ಇಂಧನ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸಲು ಇದೊಂದು ಪ್ರಯತ್ನವಾಗಿದೆ. ಇಂಧನ ಬೆಲೆಗಳು ದೇಶಾದ್ಯಂತ ತೀವ್ರವಾಗಿ ಏರುತ್ತಿವೆ. ಹಾಗಾಗಿ ವರನ ಸ್ನೇಹಿತರಲ್ಲಿ ಕೆಲವರು ಪೆಟ್ರೋಲ್ ನನ್ನು ದಂಪತಿಗೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದರು. ಜೊತೆಗೆ ಈ ಮೂಲಕ ಬೆಲೆಬಾಳುವ ಉತ್ಪನ್ನದ ಕುರಿತು ಜನರನ್ನು ಎಚ್ಚರಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 85.15 ರೂ. ತಲುಪಿದೆ. ಇದು ರಾಜ್ಯದಲ್ಲಿಯೇ ಅಧಿಕವಾಗಿದೆ. ಪೆಟ್ರೋಲ್ ವೆಚ್ಚದಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಸರ್ಕಾರ ಈ ವಿಚಾರದಲ್ಲಿ ಗಮನಹರಿಸಬೇಕು ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

 

 

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago