Featured

ನವದಂಪತಿಗೆ 5 ಲೀ. ಪೆಟ್ರೋಲ್ ಗಿಫ್ಟ್

ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಆಗಮಿಸಿದ್ದ ವರನ ಗೆಳೆಯರು 5 ಲೀಟರ್ ಪೆಟ್ರೋಲ್ ಅನ್ನು ದಂಪತಿಗೆ ಉಡುಗೊರೆಯಾಗಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ದೇಶದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಅಧಿಕವಾಗಿದ್ದರಿಂದ ಸ್ನೇಹಿತರು ನವದಂಪತಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ ಎನ್ನಲಾಗಿದೆ.

ವೇದಿಕೆಯ ಮೇಲೆ ನಿಂತಿದ್ದ ವಧು-ವರಿಗೆ ಅತಿಥಿಗಳು ಶುಭಾಶಯವನ್ನು ತಿಳಿಸುತ್ತಿದ್ದರು. ಈ ವೇಳೆ ಅವರ ಸ್ನೇಹಿತರು ಒಟ್ಟಾಗಿ ಬಂದು 5 ಲೀಟರ್ ನ ಪೆಟ್ರೋಲ್ ಕ್ಯಾನೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಸ್ನೇಹಿತರು ಗಿಫ್ಟ್ ಕೊಟ್ಟಾಗ ನಗುತ್ತಲೇ ವಧು-ವರ ಸ್ವೀಕರಿಸಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದರೆಲ್ಲರು ನಕ್ಕಿದ್ದಾರೆ. ಅಲ್ಲದೇ ಕೆಲವರು ಗಿಫ್ಟ್ ಕೊಡುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಆಗಿದ್ದು, ಸದ್ಯ ಎಲ್ಲೆಲ್ಲೂ ಹರಿದಾಡುತ್ತಿದೆ.

ವಿದ್ಯಾರ್ಥಿ ಪ್ರಭು ಮೊದಲಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶದಾದ್ಯಂತ ಇಂಧನ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸಲು ಇದೊಂದು ಪ್ರಯತ್ನವಾಗಿದೆ. ಇಂಧನ ಬೆಲೆಗಳು ದೇಶಾದ್ಯಂತ ತೀವ್ರವಾಗಿ ಏರುತ್ತಿವೆ. ಹಾಗಾಗಿ ವರನ ಸ್ನೇಹಿತರಲ್ಲಿ ಕೆಲವರು ಪೆಟ್ರೋಲ್ ನನ್ನು ದಂಪತಿಗೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದರು. ಜೊತೆಗೆ ಈ ಮೂಲಕ ಬೆಲೆಬಾಳುವ ಉತ್ಪನ್ನದ ಕುರಿತು ಜನರನ್ನು ಎಚ್ಚರಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 85.15 ರೂ. ತಲುಪಿದೆ. ಇದು ರಾಜ್ಯದಲ್ಲಿಯೇ ಅಧಿಕವಾಗಿದೆ. ಪೆಟ್ರೋಲ್ ವೆಚ್ಚದಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಸರ್ಕಾರ ಈ ವಿಚಾರದಲ್ಲಿ ಗಮನಹರಿಸಬೇಕು ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

 

 

 

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

6 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

6 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

8 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

9 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

10 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

10 hours ago