ನವದೆಹಲಿ : ಈಗಾಗಲೇ ವರುಣಾರ್ಭಟದಿಂದ ತತ್ತರಿಸಿದ ಉತ್ತರಖಂಡ್ ನಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. 120 ವರ್ಷಗಳಲ್ಲೇ ಮೊದಲ ಬಾರಿಗೆ ಭೀಕರ ಮಳೆಯಿಂದ ತತ್ತರಿಸಿದೆ.
ಬುಧವಾರ ಮತ್ತೆ ಆರು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇದರೊಂದಿಗೆ ಈ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.
ಉತ್ತರ ಪ್ರದೇಶ, ಸಿಕ್ಕಿಂ ಮತ್ತು ಉತ್ತರ ಬಂಗಾಳದ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿವಾಗಿದೆ. ಕೆಲವು ಕಡೆಗಳಲ್ಲಿ ಹೆದ್ದಾರಿಯಲ್ಲೂ ಕುಸಿತ ಸಂಭವಿಸಿದೆ. ಈ ನಡುವೆ ಗ್ಯಾಂಗ್ಟಾಕ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 10 ಅನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಕಳೆದ ಎರಡು ದಿನಗಳಿಂದ ಉತ್ತರ ಪ್ರದೇಶದ ಬರೇಲಿ ಮತ್ತು ಪಿಲಿಭಿತ್ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ನಿರಾಶ್ರಿತರಾಗಿದ್ದಾರೆ. ಇನ್ನೊಂದೆಡೆ ಜನರ ಸ್ಥಳಾಂತರ ಕಾರ್ಯವನ್ನು ಎನ್ ಡಿಆರ್ ಎಫ್ ಯೋಧರು ನಡೆಸುತ್ತಿದ್ದಾರೆ. ಅಪಾಯದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯವಾಗುತ್ತಿದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…