ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಮಸೂದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ನಿರತ ರೈತರೊಂದಿಗೆ ಕೇಂದ್ರ ಸರ್ಕಾರ ನಡೆಸಿದ ಪ್ರಯತ್ನಗಳು ವಿಫಲಗೊಂಡಿದ್ದು, ಗುರುವಾರ ಮತ್ತೊಂಂದು ಸುತ್ತಿನ ಸಭೆ ನಡೆಸಲು ಮುಂದಾಗಿದೆ.
ಇದೆಲ್ಲದರ ನಡುವೆ ಇಂದು ಸಹ ರೈತರ ಸಂಘಟನೆಗಳು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ್ದು, ಪ್ರತಿಭಟನಾನಿರತ ರೈತರು ದೆಹಲಿ ಮತ್ತು ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿದ್ದಾರೆಂದು ತಿಳಿದುಬಂದಿದೆ.
ಪಶ್ಚಿಮ ಉತ್ತರಪ್ರದೇಶದ ವಿವಿಧ ಜಿಲ್ಲೆಗಳ ರೈತರು ದೆಹಲಿ-ನೊಯ್ಡಾ ಗಡಿ ಭಾಗದಲ್ಲಿ ಜಮಾಯಿಸಿದ್ದು, ದೆಹಲಿಯಲ್ಲಿ ಹರಿಯಾಣ-ಪಂಜಾಬ್ ರೈತರು ಆಂಭಿಸಲಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜಧಾನಿಗೆ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ.
ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಪ್ರಯಾಣಿಕರು ಚಿಲ್ಲಾ ಮಾರ್ಗ ಬಳಸದೆ ದೆಹಲಿ-ನೋಯ್ಡಾ ಡೈರೆಕ್ಟ್ (ಡಿಎನ್ಡಿ) ಅಥವಾ ಕಲಿಂದಿ ಕುಂಜ್ ರಸ್ತೆಯನ್ನು ಬಳಸುವಂತೆ ದೆಹಲಿ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.
ಗೌತಮ್ ಬುದ್ಧ ದ್ವಾರ ಬಳಿ ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ನೋಯ್ಡಾ-ಲಿಂಕ್ ರಸ್ತೆಯ ಚಿಲ್ಲಾ ಗಡಿಯನ್ನು ಮುಚ್ಚಲಾಗಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…