ಹೊಸ ದಿಲ್ಲಿ: ನವಭಾರತದ ಯುವಕರಿಗೆ ಸರ್ ನೇಮ್(ಉಪನಾಮ) ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಯುವಕರು ತಮ್ಮ ಸ್ವಸಾಮರ್ಥ್ಯದಿಂದಲೇ ಹೆಸರುವಾಸಿಯಾಗ್ತಾರೆ ಎಂದು ಮನೋರಮಾ ನ್ಯೂಸ್ ಕಾನ್ ಕ್ಲೇವ್ ನ ವೀಡಿಯೋ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನವಭಾರತದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ ಎಂದಿದ್ದಾರೆ.
ನವಭಾರತ ಇಂದು ಸ್ವಹಿತಾಸಕ್ತಿಯನ್ನು ಮರೆದು, ಸಮಾಜದ ಹಿತ ಚಿಂತನೆ ನಡೆಸ್ತಿದೆ, ಸರ್ಕಾರ ನೀಡುತ್ತಿರುವ ಸಬ್ಸಿಡಿಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟುಕೊಡ್ತಿದ್ದಾರೆ, ಶತಮಾನಗಳ ಇತಿಹಾಸವಿರುವ ಗಾಂಧಿವಾದವನ್ನು ಪಾಲಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
ನವಭಾರತದ ಪರಿಕಲ್ಪನೆ ಕೆಲವೇ ಕೆಲವು ಮಂದಿಗೆ ಮಾತ್ರ ಎಂದು ಭಾವಿಸಬೇಕಿಲ್ಲ, ಇದು ದೇಶದ 130 ಕೋಟಿ ಜನರ ದನಿ ಎಂದು ಪ್ರಧಾನಿ ಹೇಳಿದ್ದಾರೆ. ಸ್ವಚ್ಛಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಿಯೇ ತೀರುತ್ತೇವೆ, ದೇಶವನ್ನು ಭ್ರಷ್ಟಾಚಾರದಿಂದಲೂ ಮುಕ್ತಗೊಳಿಸ್ತೇವೆ, ಇದಕ್ಕಾಗಿ ನಮಗೆ ಇಚ್ಛಾಶಕ್ತಿ ಇದೆ ಎಂದು ಮೋದಿ ಹೇಳಿದ್ದಾರೆ.
ಭಾರತದಲ್ಲಿನ ಭಾಷಾ ವೈವಿಧ್ಯತೆ ಹಾಗೂ ಸಾಮರಸ್ಯದ ಬಗ್ಗೆ ಮಾತನಾಡಿದ ಮೋದಿ, ಕನ್ನಡಿಗರ ಒಂದು ಗುಂಪು ಬೆಂಗಾಲಿ ಭಾಷೆ ಕಲಿತರೆ, ಹರ್ಯಾಣದ ಒಂದಷ್ಟು ಜನ ಮಲೆಯಾಳಂ ಕಲಿತರೆ ಪರಸ್ಪರ ಹತ್ತಿರವಾಗಬಹುದು ಎಂದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…