Featured

ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ – vishwanews24

ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್

ಮಂಗಳೂರು: ಬಂದರು ನಗರಿ ಮಂಗಳೂರಿಗೆ ವಿದೇಶಿ ಪ್ರವಾಸಿ ಹಡಗುಗಳ (ವಿಲಾಸಿ ಹಡಗುಗಳು) 2025-26ನೆ ಸಾಲಿನ ಭೇಟಿ ಋತು ಆರಂಭಗೊಂಡಿದ್ದು, ಸೋಮವಾರ ಪ್ರಥಮ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ ಆಗಮಿಸಿದೆ.

450 ಪ್ರಯಾಣಿಕರು ಮತ್ತು 360 ಸಿಬ್ಬಂದಿಯನ್ನು ಹೊತ್ತ ಐಷಾರಾಮಿ ಕ್ರೂಸ್ ಹಡಗು ಬೆಳಗ್ಗೆ 6:15ಕ್ಕೆ ನವಮಂಗಳೂರು ಬಂದರಿಗೆ ಆಗಮಿಸಿತು, ಬಹಾಮಾಸ್‌ನ ಧ್ವಜವನ್ನು ಹೊತ್ತ ಎಂಎಸ್ ಸೆವೆನ್ ಸೀಸ್ ಹಡಗು ಮರ್ಮುಗಾಂವೊ ಬಂದರಿನಿಂದ ಆಗಮಿಸಿದೆ. ಮಂಗಳೂರು ಕಸ್ಟಮ್ಸ್ ಆಯುಕ್ತೆ ವಿನಿತಾ ಶೇಖರ್ ನೇತೃತ್ವದಲ್ಲಿ ಎನ್‌ಎಂಪಿಎಯಲ್ಲಿ ಕ್ರೂಸ್ ಪ್ರವಾಸಿಗರಿಗೆ ಜಿಲ್ಲೆಯ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ಎನ್‌ಎಂಪಿಎ ಒದಗಿಸಿದ ಉಚಿತ ವೈ-ಫೈ ಸಂಪರ್ಕ ಮತ್ತು ಪ್ರವಾಸೋದ್ಯಮ ಸಚಿವಾಲಯ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಚಿತ್ರಿಸುವ ಸೆಲ್ಫಿ ಸ್ಟ್ಯಾಂಡ್ ಪ್ರಯಾಣಿಕರಿಗೆ ವಿಶಿಷ್ಟವಾದ ಅನುಭವವನ್ನು ನೀಡಿತು.

ಬಳಿಕ ಪ್ರವಾಸಿಗರು ಕಾರ್ಕಳ ಗೋಮಟೇಶ್ವರ ದೇವಾಲಯ, ಮೂಡಬಿದ್ರಿಯ 1,000 ಕಂಬದ ಬಸದಿ , ಸೋನ್ಸ್ ಫಾರ್ಮ್, ಪಿಲಿಕುಳ ನಿಸರ್ಗಧಾಮ, ಕುಶಲಕರ್ಮಿ ಗ್ರಾಮ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರ್ಕೆಟ್ ಮತ್ತು ವೆಲೆನ್ಸಿಯಾದ ಟ್ರಿನಿಟಿ ಹೌಸ್ ಸೇರಿದಂತೆ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು.

2025-26ನೆ ಸಾಲಿಗೆ ನವ ಮಂಗಳೂರು ಬಂದರಿಗೆ ಡಿಸೆಂಬರ್‌ನಿಂದ ಮೇ ತಿಂಗಳಲ್ಲಿ ಐದು ಹಡಗುಗಳು ಭೇಟಿ ನೀಡಲು ವೇಳಾಪಟ್ಟಿ ನಿಗದಿಯಾಗಿದೆ.

ಇದನ್ನೂ ಓದಿ ಎಮ್ ಡಿಎಮ್ಎ ಮಾರಾಟ ಪ್ರಕರಣ: ಓರ್ವ ಆರೋಪಿ ಸೆರೆ
ಡಿಸೆಂಬರ್ 22ರಿಂದ ಪ್ರಸಕ್ತ ಸಾಲಿನ ಪ್ರಥಮ ವಿದೇಶಿ ಪ್ರವಾಸಿ ಹಡಗು ನವ ಮಂಗಳೂರು ಬಂದರಿಗೆ ಬಹುತೇಕ ವಾಗಿ ಯೂರೋಪ್ ರಾಷ್ಟ್ರಗಳಿಂದ ಹೊರಡುವ ವಿಲಾಸಿ ಪ್ರವಾಸಿ ಹಡಗುಗಳು ಮಂಗಳೂರು ಬಂದರಿಗೂ ಭೇಟಿ ನೀಡುತ್ತವೆ. ಮಂಗಳೂರಿನ ಭೇಟಿಯ ವೇಳೆ ವಿವಿಧ ರಾಷ್ಟ್ರಗಳ ಪ್ರವಾಸಿಗರಿಗೆ ಇಲ್ಲಿನ ಸಂಸ್ಕೃತಿ, ಇಲ್ಲಿನ ಪ್ರಮುಖ ತಾಣಗಳನ್ನು ಪರಿಚಯಿಸಲಾಗುತ್ತದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago