Featured

ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ – vishwanews24

ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್

ಮಂಗಳೂರು: ಬಂದರು ನಗರಿ ಮಂಗಳೂರಿಗೆ ವಿದೇಶಿ ಪ್ರವಾಸಿ ಹಡಗುಗಳ (ವಿಲಾಸಿ ಹಡಗುಗಳು) 2025-26ನೆ ಸಾಲಿನ ಭೇಟಿ ಋತು ಆರಂಭಗೊಂಡಿದ್ದು, ಸೋಮವಾರ ಪ್ರಥಮ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ ಆಗಮಿಸಿದೆ.

450 ಪ್ರಯಾಣಿಕರು ಮತ್ತು 360 ಸಿಬ್ಬಂದಿಯನ್ನು ಹೊತ್ತ ಐಷಾರಾಮಿ ಕ್ರೂಸ್ ಹಡಗು ಬೆಳಗ್ಗೆ 6:15ಕ್ಕೆ ನವಮಂಗಳೂರು ಬಂದರಿಗೆ ಆಗಮಿಸಿತು, ಬಹಾಮಾಸ್‌ನ ಧ್ವಜವನ್ನು ಹೊತ್ತ ಎಂಎಸ್ ಸೆವೆನ್ ಸೀಸ್ ಹಡಗು ಮರ್ಮುಗಾಂವೊ ಬಂದರಿನಿಂದ ಆಗಮಿಸಿದೆ. ಮಂಗಳೂರು ಕಸ್ಟಮ್ಸ್ ಆಯುಕ್ತೆ ವಿನಿತಾ ಶೇಖರ್ ನೇತೃತ್ವದಲ್ಲಿ ಎನ್‌ಎಂಪಿಎಯಲ್ಲಿ ಕ್ರೂಸ್ ಪ್ರವಾಸಿಗರಿಗೆ ಜಿಲ್ಲೆಯ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ಎನ್‌ಎಂಪಿಎ ಒದಗಿಸಿದ ಉಚಿತ ವೈ-ಫೈ ಸಂಪರ್ಕ ಮತ್ತು ಪ್ರವಾಸೋದ್ಯಮ ಸಚಿವಾಲಯ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಚಿತ್ರಿಸುವ ಸೆಲ್ಫಿ ಸ್ಟ್ಯಾಂಡ್ ಪ್ರಯಾಣಿಕರಿಗೆ ವಿಶಿಷ್ಟವಾದ ಅನುಭವವನ್ನು ನೀಡಿತು.

ಬಳಿಕ ಪ್ರವಾಸಿಗರು ಕಾರ್ಕಳ ಗೋಮಟೇಶ್ವರ ದೇವಾಲಯ, ಮೂಡಬಿದ್ರಿಯ 1,000 ಕಂಬದ ಬಸದಿ , ಸೋನ್ಸ್ ಫಾರ್ಮ್, ಪಿಲಿಕುಳ ನಿಸರ್ಗಧಾಮ, ಕುಶಲಕರ್ಮಿ ಗ್ರಾಮ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರ್ಕೆಟ್ ಮತ್ತು ವೆಲೆನ್ಸಿಯಾದ ಟ್ರಿನಿಟಿ ಹೌಸ್ ಸೇರಿದಂತೆ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು.

2025-26ನೆ ಸಾಲಿಗೆ ನವ ಮಂಗಳೂರು ಬಂದರಿಗೆ ಡಿಸೆಂಬರ್‌ನಿಂದ ಮೇ ತಿಂಗಳಲ್ಲಿ ಐದು ಹಡಗುಗಳು ಭೇಟಿ ನೀಡಲು ವೇಳಾಪಟ್ಟಿ ನಿಗದಿಯಾಗಿದೆ.

ಇದನ್ನೂ ಓದಿ ಎಮ್ ಡಿಎಮ್ಎ ಮಾರಾಟ ಪ್ರಕರಣ: ಓರ್ವ ಆರೋಪಿ ಸೆರೆ
ಡಿಸೆಂಬರ್ 22ರಿಂದ ಪ್ರಸಕ್ತ ಸಾಲಿನ ಪ್ರಥಮ ವಿದೇಶಿ ಪ್ರವಾಸಿ ಹಡಗು ನವ ಮಂಗಳೂರು ಬಂದರಿಗೆ ಬಹುತೇಕ ವಾಗಿ ಯೂರೋಪ್ ರಾಷ್ಟ್ರಗಳಿಂದ ಹೊರಡುವ ವಿಲಾಸಿ ಪ್ರವಾಸಿ ಹಡಗುಗಳು ಮಂಗಳೂರು ಬಂದರಿಗೂ ಭೇಟಿ ನೀಡುತ್ತವೆ. ಮಂಗಳೂರಿನ ಭೇಟಿಯ ವೇಳೆ ವಿವಿಧ ರಾಷ್ಟ್ರಗಳ ಪ್ರವಾಸಿಗರಿಗೆ ಇಲ್ಲಿನ ಸಂಸ್ಕೃತಿ, ಇಲ್ಲಿನ ಪ್ರಮುಖ ತಾಣಗಳನ್ನು ಪರಿಚಯಿಸಲಾಗುತ್ತದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

14 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

16 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

17 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

17 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

17 hours ago