Featured

ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ – vishwanews24

ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್

ಮಂಗಳೂರು: ಬಂದರು ನಗರಿ ಮಂಗಳೂರಿಗೆ ವಿದೇಶಿ ಪ್ರವಾಸಿ ಹಡಗುಗಳ (ವಿಲಾಸಿ ಹಡಗುಗಳು) 2025-26ನೆ ಸಾಲಿನ ಭೇಟಿ ಋತು ಆರಂಭಗೊಂಡಿದ್ದು, ಸೋಮವಾರ ಪ್ರಥಮ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ ಆಗಮಿಸಿದೆ.

450 ಪ್ರಯಾಣಿಕರು ಮತ್ತು 360 ಸಿಬ್ಬಂದಿಯನ್ನು ಹೊತ್ತ ಐಷಾರಾಮಿ ಕ್ರೂಸ್ ಹಡಗು ಬೆಳಗ್ಗೆ 6:15ಕ್ಕೆ ನವಮಂಗಳೂರು ಬಂದರಿಗೆ ಆಗಮಿಸಿತು, ಬಹಾಮಾಸ್‌ನ ಧ್ವಜವನ್ನು ಹೊತ್ತ ಎಂಎಸ್ ಸೆವೆನ್ ಸೀಸ್ ಹಡಗು ಮರ್ಮುಗಾಂವೊ ಬಂದರಿನಿಂದ ಆಗಮಿಸಿದೆ. ಮಂಗಳೂರು ಕಸ್ಟಮ್ಸ್ ಆಯುಕ್ತೆ ವಿನಿತಾ ಶೇಖರ್ ನೇತೃತ್ವದಲ್ಲಿ ಎನ್‌ಎಂಪಿಎಯಲ್ಲಿ ಕ್ರೂಸ್ ಪ್ರವಾಸಿಗರಿಗೆ ಜಿಲ್ಲೆಯ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ಎನ್‌ಎಂಪಿಎ ಒದಗಿಸಿದ ಉಚಿತ ವೈ-ಫೈ ಸಂಪರ್ಕ ಮತ್ತು ಪ್ರವಾಸೋದ್ಯಮ ಸಚಿವಾಲಯ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಚಿತ್ರಿಸುವ ಸೆಲ್ಫಿ ಸ್ಟ್ಯಾಂಡ್ ಪ್ರಯಾಣಿಕರಿಗೆ ವಿಶಿಷ್ಟವಾದ ಅನುಭವವನ್ನು ನೀಡಿತು.

ಬಳಿಕ ಪ್ರವಾಸಿಗರು ಕಾರ್ಕಳ ಗೋಮಟೇಶ್ವರ ದೇವಾಲಯ, ಮೂಡಬಿದ್ರಿಯ 1,000 ಕಂಬದ ಬಸದಿ , ಸೋನ್ಸ್ ಫಾರ್ಮ್, ಪಿಲಿಕುಳ ನಿಸರ್ಗಧಾಮ, ಕುಶಲಕರ್ಮಿ ಗ್ರಾಮ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರ್ಕೆಟ್ ಮತ್ತು ವೆಲೆನ್ಸಿಯಾದ ಟ್ರಿನಿಟಿ ಹೌಸ್ ಸೇರಿದಂತೆ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು.

2025-26ನೆ ಸಾಲಿಗೆ ನವ ಮಂಗಳೂರು ಬಂದರಿಗೆ ಡಿಸೆಂಬರ್‌ನಿಂದ ಮೇ ತಿಂಗಳಲ್ಲಿ ಐದು ಹಡಗುಗಳು ಭೇಟಿ ನೀಡಲು ವೇಳಾಪಟ್ಟಿ ನಿಗದಿಯಾಗಿದೆ.

ಇದನ್ನೂ ಓದಿ ಎಮ್ ಡಿಎಮ್ಎ ಮಾರಾಟ ಪ್ರಕರಣ: ಓರ್ವ ಆರೋಪಿ ಸೆರೆ
ಡಿಸೆಂಬರ್ 22ರಿಂದ ಪ್ರಸಕ್ತ ಸಾಲಿನ ಪ್ರಥಮ ವಿದೇಶಿ ಪ್ರವಾಸಿ ಹಡಗು ನವ ಮಂಗಳೂರು ಬಂದರಿಗೆ ಬಹುತೇಕ ವಾಗಿ ಯೂರೋಪ್ ರಾಷ್ಟ್ರಗಳಿಂದ ಹೊರಡುವ ವಿಲಾಸಿ ಪ್ರವಾಸಿ ಹಡಗುಗಳು ಮಂಗಳೂರು ಬಂದರಿಗೂ ಭೇಟಿ ನೀಡುತ್ತವೆ. ಮಂಗಳೂರಿನ ಭೇಟಿಯ ವೇಳೆ ವಿವಿಧ ರಾಷ್ಟ್ರಗಳ ಪ್ರವಾಸಿಗರಿಗೆ ಇಲ್ಲಿನ ಸಂಸ್ಕೃತಿ, ಇಲ್ಲಿನ ಪ್ರಮುಖ ತಾಣಗಳನ್ನು ಪರಿಚಯಿಸಲಾಗುತ್ತದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago