Featured

ನವರಾತ್ರಿ ಉತ್ಸವಕ್ಕೆ ಯಾವುದೇ ಅಡಚಣೆ ಆಗದಂತೆ ಕ್ರಮ ವಹಿಸಲು ಶಾಸಕ ಕಾಮತ್‌ ಸೂಚನೆ -Vishwanews24

ಮಂಗಳೂರು,:ಇದೇ ಸೆಪ್ಟೆಂಬರ್ 28ರಿಂದ ಮಂಗಳೂರು ಮಹಾನಗರದಲ್ಲಿ ನವರಾತ್ರಿ ಹಬ್ಬದ ಆಚರಣೆಗಳು ಪ್ರಾರಂಭವಾಗಲಿದ್ದು, ವಿವಿಧ ಸೇವಾ ಸಮಿತಿಗಳಿಂದ ಹಲವೆಡೆ ಸಾರ್ವಜನಿಕ ಶಾರದಾ ಮಹೋತ್ಸವಗಳು ನಡೆಯಲಿವೆ. ಮೈಸೂರಿನಂತೆ ಆದ್ದೂರಿಯಾಗಿ ಇಲ್ಲಿ ಕೂಡ ಮಂಗಳೂರು ದಸರಾ ಉತ್ಸವವನ್ನು ಆಚರಿಸಲಾಗುತ್ತದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅದೇ ರೀತಿಯಲ್ಲಿ ವಿವಿಧ ದೇವಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆದ್ದರಿಂದ ಯಾವುದೇ ಯುವಕ ಮಂಡಲಗಳು, ಶಾರದಾ ಮಹೋತ್ಸವ ಸೇವಾ ಸಮಿತಿಯವರು ಸಾರ್ವಜನಿಕ ಶಾರದಾ ಮಹೋತ್ಸವವನ್ನು ಆಚರಿಸಲು ವಿದ್ಯುತ್ ಸಂಪರ್ಕದ ಬಗ್ಗೆ ಅರ್ಜಿ ಸಲ್ಲಿಸಿದ್ದಲ್ಲಿ ಮೆಸ್ಕಾಂ ಕಚೇರಿಯಿಂದ ಯಾವುದೇ ವಿಳಂಬ ಮಾಡದೇ ಮಂಜೂರು ಮಾಡಬೇಕು.

ಹಾಗೆ ಶಾರದಾ ಮಾತೆಯ ಶೋಭಾಯಾತ್ರೆ ಮಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸುವುದರಿಂದ ಎಲ್ಲಾ ರಸ್ತೆಗಳಲ್ಲಿ ಯಾವುದೇ ಹೊಂಡ, ಗುಂಡಿಗಳಿದ್ದಲ್ಲಿ ಅದನ್ನು ತಕ್ಷಣ ಮುಚ್ಚಿ ಶೋಭಾಯಾತ್ರೆ ಸರಾಗವಾಗಿ ಸಾಗಲು ಅನುಕೂಲವಾಗುವಂತೆ ಮಂಗಳೂರು ಮಹಾನಗರ ಪಾಲಿಕೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು.

ನಗರದಲ್ಲಿ ಶೋಭಾಯಾತ್ರೆ ಅಥವಾ ದಸರಾಗೆ ಸಂಬಂಧಿಸಿದ ಇತರ ಯಾವುದೇ ಅನುಮತಿಯನ್ನು ಪೊಲೀಸ್ ಕಮೀಷನರೇಟ್ ಕಚೇರಿಯಿಂದ ಕೊಡಲು ಸಹಕರಿಸಬೇಕೆಂದು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago