ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ ಮಾರ್ಪಾಡು ಮಾಡಲಾಗುವುದು ಎಂದು ಆದೇಶಿಸಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಆದೇಶಿಸಿದ್ದಾರೆ.
ಇದೇ ಸೆ.26ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 05ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ ಆದೇಶಿಸಿದ್ದಾರೆ.
ಮಂಗಳೂರು- ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.
ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು.
ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.
ರಥಬೀದಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ-2022
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…