ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ.
ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು.
ಅಲ್ಲಿ ಸೂರಜ್ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಮಗನ ಜೊತೆಯಲ್ಲೇ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಶ್ರೀಲಂಕಾಗೆ ಹನಿಮೂನ್ಗೆ ತೆರಳಿದ್ದಾಗ ಸೂರಜ್ಗೆ ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಗಾನವಿಗೆ ಸಂಬಂಧ ಇದ್ದ ವಿಚಾರ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದಿದೆ.
ಗಾನವಿ ಬೆಂಗಳೂರಿಗೆ ಮರಳಿದ್ದರೂ ಬೇರೊಬ್ಬನ ಜೊತೆ ವಿವಾಹ ಪೂರ್ವ ಸಂಬಂಧ ಇದ್ದ ಕಾರಣ ಆಕೆಯನ್ನು ಸೂರಜ್ ಕುಟುಂಬ ಸ್ವೀಕರಿಸಲಿಲ್ಲ. ಸೂರಜ್ ಕುಟುಂಬದಿಂದ ಅವಮಾನವಾಗಿದ್ದಕ್ಕೆ ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…