ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ.
ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು.
ಅಲ್ಲಿ ಸೂರಜ್ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಮಗನ ಜೊತೆಯಲ್ಲೇ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಶ್ರೀಲಂಕಾಗೆ ಹನಿಮೂನ್ಗೆ ತೆರಳಿದ್ದಾಗ ಸೂರಜ್ಗೆ ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಗಾನವಿಗೆ ಸಂಬಂಧ ಇದ್ದ ವಿಚಾರ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದಿದೆ.
ಗಾನವಿ ಬೆಂಗಳೂರಿಗೆ ಮರಳಿದ್ದರೂ ಬೇರೊಬ್ಬನ ಜೊತೆ ವಿವಾಹ ಪೂರ್ವ ಸಂಬಂಧ ಇದ್ದ ಕಾರಣ ಆಕೆಯನ್ನು ಸೂರಜ್ ಕುಟುಂಬ ಸ್ವೀಕರಿಸಲಿಲ್ಲ. ಸೂರಜ್ ಕುಟುಂಬದಿಂದ ಅವಮಾನವಾಗಿದ್ದಕ್ಕೆ ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…