ಬೆಂಗಳೂರು: ಯುದ್ದಗ್ರಸ್ಥ ಉಕ್ರೇನ್ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ ಸವನ್ನಪ್ಪಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ನ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು, ಯುದ್ಧನಿಂತ ಬಳಿಕ ಮೃತದೇಹವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ, ನವೀನ್ ಮೃತದೇಹವನ್ನು ತರಲು ನಮ್ಮ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನ ಮಾಡುತ್ತಿದ್ದು, ಸಂಬಂಧಪಟ್ಟ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವರು ಹೇಳಿದ್ದಾರೆ ಎಂದರು.
ಇನ್ನು ಉಕ್ರೇನ್ನ ಕೆಲವು ಪ್ರಮುಖ ನಗರಗಳಲ್ಲಿ ಈಗಲೂ ಪರಿಸ್ಥಿತಿ ಹೇಳಿಕೊಳ್ಳುವಂತಿಲ್ಲ. ಅಲ್ಲಿ ನಿರಂತರವಾಗಿ ಬಾಂಬ್ ದಾಳಿ, ಶೆಲ್ ದಾಳಿ, ಗುಂಡಿನ ಚಕಮಕಿ ನಡೆಯುತ್ತಲೇ ಇದೆ. ಸಮಯ ಮತ್ತು ಪರಿಸ್ಥಿತಿ ನೋಡಿಕೊಂಡು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…