ಹಾವೇರಿ : ಉಕ್ರೇನ್ನಲ್ಲಿ ರಷ್ಯಾ ಪಡೆಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇದೇ 2ರಂದು ಮೃತಪಟ್ಟಿರುವ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ಸ್ವಗ್ರಾಮ ರಾಣಿಬೆನ್ನೂರು ತಾಲೂಕು ಚಳಗೇರಿಗೆ ಆಗಮಿಸಿದ್ದು, ಕುಟುಂಬಸ್ಥರರಿಂದ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನವೀನ್ ಪಾರ್ಥಿವ ಶರೀರವನ್ನು ಚಳಗೇರಿಯ ನಿವಾಸಕ್ಕೆ ತಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ ನೆರವೇರಿಸಲಾಗುತ್ತಿದ್ದು ಬಳಿಕ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ.
ಕುಟುಂಬಸ್ಥರ ಆಕ್ರಂದನ
ನವೀನ್ ಮೃತಪಟ್ಟು 21 ದಿನಗಳ ಬಳಿಕ ಪಾರ್ಥಿವ ಶರೀರ ಮನೆಗೆ ಆಗಮಿಸಿದ್ದು, ನವೀನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ಮಡುಕಟ್ಟಿದ್ದು, ಗ್ರಾಮಸ್ಥರೆಲ್ಲರು ನವೀನ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ.
ದೇಹದಾನಕ್ಕೆ ನಿರ್ಧಾರ
ಅಂತಿಮ ದರ್ಶನದ ಬಳಿಕ ಚಳಗೇರಿ ಗ್ರಾಮದಲ್ಲಿ ನವೀನ್ ಮೆರವಣಿಗೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇಡಿ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಗುತ್ತದೆ. ನವೀನ್ ದೇಹದಾನಕ್ಕೆ ಪೋಷಕರು ನಿರ್ಧರಿಸಿರುವಂತೆ ಮೆರವಣಿಗೆ ಬಳಿಕ ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನವೀನ್ ದೇಹವನ್ನು ಹಸ್ತಾಂತರ ಮಾಡಲಾಗುತ್ತಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…