Featured

ನವೀನ್‌ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರಿಂದ ಪೂಜೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ – Vishwanews24

ಗಣ್ಯರು, ಸಾರ್ವಜನಿಕರಿಂದ ಅಂತಿಮ ದರ್ಶನ..

ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನವೀನ್ ದೇಹದಾನ..

ಹಾವೇರಿ : ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಬಾಂಬ್‌ ದಾಳಿಯಲ್ಲಿ ಇದೇ 2ರಂದು ಮೃತಪಟ್ಟಿರುವ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್‌ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ಸ್ವಗ್ರಾಮ ರಾಣಿಬೆನ್ನೂರು ತಾಲೂಕು ಚಳಗೇರಿಗೆ ಆಗಮಿಸಿದ್ದು, ಕುಟುಂಬಸ್ಥರರಿಂದ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನವೀನ್‌ ಪಾರ್ಥಿವ ಶರೀರವನ್ನು ಚಳಗೇರಿಯ ನಿವಾಸಕ್ಕೆ ತಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ ನೆರವೇರಿಸಲಾಗುತ್ತಿದ್ದು ಬಳಿಕ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ.

ಕುಟುಂಬಸ್ಥರ ಆಕ್ರಂದನ
ನವೀನ್ ಮೃತಪಟ್ಟು 21 ದಿನಗಳ ಬಳಿಕ ಪಾರ್ಥಿವ ಶರೀರ ಮನೆಗೆ ಆಗಮಿಸಿದ್ದು, ನವೀನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ಮಡುಕಟ್ಟಿದ್ದು, ಗ್ರಾಮಸ್ಥರೆಲ್ಲರು ನವೀನ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ.

ದೇಹದಾನಕ್ಕೆ ನಿರ್ಧಾರ
ಅಂತಿಮ ದರ್ಶನದ ಬಳಿಕ ಚಳಗೇರಿ ಗ್ರಾಮದಲ್ಲಿ ನವೀನ್ ಮೆರವಣಿಗೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇಡಿ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಗುತ್ತದೆ. ನವೀನ್ ದೇಹದಾನಕ್ಕೆ ಪೋಷಕರು ನಿರ್ಧರಿಸಿರುವಂತೆ ಮೆರವಣಿಗೆ ಬಳಿಕ ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನವೀನ್ ದೇಹವನ್ನು ಹಸ್ತಾಂತರ ಮಾಡಲಾಗುತ್ತಿದೆ.

Vishwa News 24

Recent Posts

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

25 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

30 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

39 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

52 minutes ago

ಸುಳ್ಯ : ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ – vishwanews24

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…

1 hour ago