Featured

ದೇಶದಾದ್ಯಂತ ನವೆಂಬರ್‌ 1 ಅನ್ನು ಕನ್ನಡ ದಿನವಾಗಿ ಆಚರಿಸಬೇಕು : ಎಚ್​.ಡಿ.ಕುಮಾರಸ್ವಾಮಿ -Vishwanews24

ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು : ಎಚ್​.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು: ಇಂದು ಹಿಂದಿ ದಿವಸ್​. ಹಿಂದಿ ಹೇರಿಕೆ ಕುರಿತಂತೆ ಇದಾಗಲೇ ಕೆಲವರು ಪ್ರತಿಭಟನೆಗೆ ಇಳಿದಿದ್ದಾರೆ. ಅದೇ ರೀತಿ ಇವತ್ತು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರೂ ಹಿಂದಿ ದಿವಸ್​ ಹಾಗೂ ಹಿಂದಿ ಹೇರಿಕೆ ವಿರುದ್ಧ ಸರಣಿ ಟ್ವೀಟ್​ ಮಾಡಿದ್ದಾರೆ.

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು ಎಂದು ಹೇಳಿದ್ದಾರೆ.

 

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿನ ದಿವಸ್​ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು. ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ ಅವರು ಈ ದಿನದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago