ಉಡುಪಿ : ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಜಿಲ್ಲಾಧಿಕರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಪಟ್ಟ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂದಾಪುರದ ಫ್ಲೈ ಓವರ್ ಕಾಮಗಾರಿ, ಮೂರ್ಕೈ ಬಳಿಯ ಅಂಡರ್ಪಾಸ್ ಕಾಮಗಾರಿ, ಪಡುಬಿದ್ರೆಯ ಬ್ರಿಡ್ಜ್ ಕಾಮಗಾರಿ ವಿಳಂಬ ಕುರಿತಂತೆ ಸಾರ್ವಜನಿಕರಿಂದ ಪದೇ ಪದೇ ದೂರುಗಳು, ಮನವಿಗಳು ಸಲ್ಲಿಕೆಯಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಉತ್ತರಿಸಬೇಕಿದೆ, ಯಾವಾಗ ಕಾಮಗಾರಿ ಮುಕ್ತಾಯಗೊಂಡು, ಸಾರ್ವಜನಿಕ ಬಳಕೆಗೆ ಮುಕ್ತವಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿ, ಪ್ರಸ್ತುತ ಮಳೆ ಸಹ ಕಡಿಮೆಯಾಗಿದೆ, ಕೋವಿಡ್ನಿಂದ ಊರುಗಳಿಗೆ ತೆರಳಿದ್ದ ಕಾರ್ಮಿಕರೂ ಸಹ ಆಗಮಿಸುತ್ತಿದ್ದು, ಕಾಮಗಾರಿ ಮುಕ್ತಾಯಗೊಳಿಸಲು ಏನು ತೊಂದರೆಯಿದೆ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರು.
ಈ ಬಗ್ಗೆ ಉತ್ತರಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಇದೇ ನವೆಂಬರ್ ಅಂತ್ಯದೊಳಗೆ ಕುಂದಾಪುರದ ಫ್ಲೈ ಓವರ್ ಸಂಪೂರ್ಣ ಮುಕ್ತಾಯಗೊಳಿಸಲಾಗುವುದು, ಮತ್ತು ಮೂರ್ ಕೈ ನ ಅಂಡರ್ ಪಾಸ್ ಹಾಗೂ ಪಡುಬಿದ್ರೆ ಬ್ರಿಡ್ಜ್ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಮುಕ್ತಾಯಗೊಳಿಸಲಾಗುವುದು ಎಂದರು.
ಮೂರ್ಕೈ ಅಂಡರ್ ಪಾಸ್ ಬಳಿ ನೀರು ನಿಲ್ಲುವ ಕುರಿತಂತೆ ಕುಂದಾಪುರ ಉಪವಿಭಾಗಾಧಿಕಾರಿಗಳೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಿ,ಕಾಮಗಾರಿ ಕೈಗೊಳ್ಳುವಂತೆ ಡಿಸಿ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈಗಾಗಲೇ ಗುರುತಿಸಲಾಗಿರುವ 32 ಬ್ಲಾಕ್ ಸ್ಪಾಟ್ ಗಳಲ್ಲಿ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆಗಳಲ್ಲಿ ಬೀದಿ ದೀಪ ಆನ್ ಆಗುತ್ತಿಲ್ಲ ಈ ಬಗ್ಗೆ ಪರಿಶೀಲಿಸಿ, ಪಾಟ್ ಹೋಲ್ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಜಿ.ಜಗದೀಶ್ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ 169ಎ ಗೆ ಸಂಬಂಧಿಸಿದಂತೆ ಪರ್ಕಳ ಬಳಿಯಲ್ಲಿನ ಅಪಾಯಕಾರಿ ಗುಂಡಿಗಳಿದ್ದು ಎಲ್ಲಾ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಇಂದ್ರಾಳಿಯ ರೈಲ್ವೆ ಬ್ರಿಡ್ಜ್ ಕಾಮಗಾರಿ ಕುರಿತಂತೆ ನೀಡುವಂತೆ ಸೂಚಿಸಿದರು.
ಇಂದ್ರಾಳಿಯ ರೈಲ್ವೆ ಬ್ರಿಡ್ಜ್ ಕಾಮಗಾರಿ ಕುರಿತ ವಿನ್ಯಾಸವನ್ನು ಐಐಟಿ ಮದ್ರಾಸ್ ನ ಪರಿಶೀಲನೆಗೆ ಕಳುಹಿಸಲಾಗಿದ್ದು, ಅಲ್ಲಿಂದ ಪರಿಶೀಲನೆಯಾಗಿ ಬಂದ ವಿನ್ಯಾಸವನ್ನು ಮುಂಬೈನ ಕೊಂಕಣ ರೈಲ್ವೆ ಕಚೇರಿಗೆ ಕಳುಹಿಸಲಾಗಿದೆ, ಅನುಮೋದನೆ ಬಂದ ಕೂಡಲೇ ಕಂಪೋಸಿಟ್ ಸ್ಟೀಲ್ ಬಿಡ್ಜ್ ಕಾಮಗಾರಿ ಆರಂಭಿಸಲಾಗುವುದು, ಏಪ್ರಿಲ್ 2021 ರೊಳಗೆ ರಾಷ್ಟ್ರೀಯ ಹೆದ್ದಾರಿ 169ಎ ಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ಅಧಿಕಾರಿಗಳು ಉತ್ತರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಥ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ತಾಲೂಕುಗಳ ತಹಸೀಲ್ದಾರ್ ಗಳು, ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನ ಅಧಿಕಾರಿಗಳು ಉಪಸ್ಥಿತರಿದ್ದರು
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…