Featured

ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ – vishwanews24

ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ

ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಾಡುವುದಾಗಿ ಅದಾನಿ ಸಂಸ್ಥೆಯ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾಧಿಕಾರಿ ಸ್ವರೂಪಾ ಟಿ. ಕೆ. ಉಪಸ್ಥಿತಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಂಸ್ಥೆಯ ಅಧಿಕಾರಿಗಳು ನವೆಂಬರ್‌ವೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಗ್ಯಾಸ್ ವಿತರಣೆ ಮಾಡುವುದಾಗಿ ಸಭೆಗೆ ತಿಳಿಸಿದ್ದಾರೆ.

ಸುಮಾರು 25,000 ಕುಟುಂಬಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆ ವಿಳಂಬವಾಗುತ್ತಿರುವ ಬಗ್ಗೆ ಇಲಾಖಾ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಂಸದರು, ಪಣಂಬೂರಿನಿಂದ ಕರಾವಳಿ ಜಂಕ್ಷನ್‌ವರೆಗೆ ಸುಮಾರು 48 ಕಿ. ಮೀ. ಪೈಪ್‌ಲೈನ್ ವಿಸ್ತರಣೆಯಾಗಿದ್ದು, ಮುಂದುವರಿದು ಕರಾವಳಿ ಜಂಕ್ಷನ್‌ನಿಂದ ಮಣಿಪಾಲದ ಉಪೇಂದ್ರ ಪೈ ವೃತ್ತದ ವರೆಗೆ ಪೈಪ್‌ಲೈನ್ ಸಂಪರ್ಕವಾಗಿದ್ದು, ತತ್‌ಕ್ಷಣ ಮನೆಮನೆಗೆ ಗ್ಯಾಸ್ ವಿತರಣೆ ಆರಂಭಿಸಬೇಕೆಂದು ನಿರ್ದೇಶಿಸಿದರು.

ಸುಮಾರು 2,000 ಕುಟುಂಬಗಳಿಗೆ ಪ್ರಥಮ ಹಂತದಲ್ಲಿ ಪೈಪ್‌ಲೈನ್ ಮೂಲಕ ಗ್ಯಾಸ್ ಹಂಚಿಕೆಗಾಗಿ ಸಂಪರ್ಕ ಕಲ್ಪಿಸಲಾ ಗುತ್ತಿದೆ. 300 ಕಿ. ಮೀ. ವ್ಯಾಪ್ತಿಯ ಪೈಪ್‌ಲೈನ್ ವಿಸ್ತರಣ ಜಾಲವು ಯೋಜನೆಯ ಗುರಿಯಾಗಿದ್ದು, ಸುಮಾರು 200 ಕಿ. ಮೀ.ವರೆಗೆ ಸಂಪರ್ಕ ಕಲ್ಪಿಸಲಾಗಿದೆ. ಆದರೆ ನಗರಸಭಾ ಅಧಿಕಾರಿಗಳು ಮಳೆಗಾಲದಲ್ಲಿ ಕಾಮಗಾರಿಯನ್ನು ನಿಲ್ಲಿಸಲು ಸೂಚಿಸಿದ್ದರಿಂದ ಅಕ್ಟೋಬರ್‌ನಲ್ಲಿ ಕಾಮಗಾರಿ ಪುನಃ ಆರಂಭಿಸಿ, ನವೆಂಬರ್‌ವೊದಲ ವಾರದಲ್ಲಿ ಮನೆಮನೆಗೆ ಅಡುಗೆ ಗ್ಯಾಸ್ ಸಂಪರ್ಕ ನೀಡಲು ಅದಾನಿ ಸಂಸ್ಥೆಗೆ ಸೂಚಿಸಿದರು.

ಗೇಲ್ ಸಂಸ್ಥೆಯು ಅನಿಲ ಸರಬರಾಜು ವ್ಯವಸ್ಥೆಯಲ್ಲಿನ ಕಾಮಗಾರಿಯನ್ನು ಪೂರ್ತಿ ಮುಗಿಸಿದ್ದರೂ ಪಣಂಬೂರಿನಲ್ಲಿ ಗ್ಯಾಸ್ ವಿತರಣ ವ್ಯವಸ್ಥೆಯ ಯೋಜನೆಯು ಪೂರ್ಣ ಗೊಂಡಿದ್ದರಿಂದ ಜಿಲ್ಲೆಯಲ್ಲಿ ಬಳಕೆಯಿರುವ ಸಿ.ಎನ್.ಜಿ. ವಿತರಣ ಕೇಂದ್ರಗಳಿಗೆ ಸರಿಯಾದ ಸಮಯದಲ್ಲಿ ಸಿ.ಎನ್.ಜಿ. ಪೂರೈಸುವ ಬಗ್ಗೆ ಸಭೆಗೆ ತಿಳಿಸಿದರು. ಅರ್ಜಿ ಹಾಕಿದ ವಿತರಣ ಸಂಸ್ಥೆಗೆ ಗ್ಯಾಸ್ ಸಂಪರ್ಕ ನೀಡಲು ಸಭೆಗೆ ತಿಳಿಸಿದರು.

ನಗರಸಭೆಯ ಕಾರ್ಯಪಾಲಕ ಅಭಿಯಂತ ದುರ್ಗಾ ಪ್ರಸಾದ್, ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ಸುಬ್ರಹ್ಮಣ್ಯ, ಗೇಲ್ ಕಂಪೆನಿ ಡೆಪ್ಯುಟಿ ಜನರಲ್ ಮ್ಯಾನೇಜರ್‌ಪ್ರಿನ್ಸ್ ಲಾರೆನ್ಸ್, ಆಹಾರ ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್‌ಪ್ರಕಾಶ್ ಉಪಸ್ಥಿತರಿದ್ದರು.

Vishwa News 24

Recent Posts

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

39 seconds ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

19 minutes ago

ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ – vishwanews24

 ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ      ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…

2 hours ago

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ   ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24)…

2 hours ago

ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ – vishwanews24

 ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ   ಉಡುಪಿ : ನೇಪಾಳ ಮತ್ತು…

2 hours ago

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

20 hours ago