Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ರಾಮನಗರ: ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆಗಳು ಆಗಲಿವೆ, ಕಾಯ್ದು ನೋಡಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಎಚ್ಡಿಕೆ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಭೆ ನಡೆಸಿ ಮಾತನಾಡಿದ ಅವರು, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ನೋಡೋಣ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಅಂಜಿಕೆ ಬೇಡ ಎಂದರು.
ಇವರೂ ಲೂಟಿ ಮಾಡ್ತಾರೆ: ಬಿಜೆಪಿಯವರು ಲೂಟಿ ಮಾಡಿದ ರೀತಿಯಲ್ಲೆ ಕಾಂಗ್ರೆಸ್ ನವರು ಲೊಟಿಗೆ ಇಳಿಯಲಿದ್ದಾರೆ ಅದರಲ್ಲೇನು ಹೊಸತಿಲ್ಲ, ಯಾರನ್ನು ಎಲ್ಲಿ ಹಿಡಿಯಬೇಕೆಂದು ನನಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟ ಮಾಡಲು ಸಿದ್ದನಿದ್ದೇನೆ, ಯಾವುದೇ ಕಾರಣಕ್ಕೂ ಈ ಸರ್ಕಾರದ ಮಂತ್ರಿಗಳ ಬಳಿ ಕೈ ಚಾಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಗ್ಯಾರಂಟಿ ಜಾರಿಯಾಗಲ್ಲ: ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಸೇರಿದಂತೆ ಯಾವುದೇ ಯೋಜನೆಯನ್ನು ಜಾರಿಗೆ ತರುವುದು ಸುಲಭವಲ್ಲ. ಈ ಹಿಂದೆ ಜಾರಿಯಲ್ಲಿರುವ ಕಾರ್ಯಕ್ರಮಗಳೇ ಮುಂದುವರಿಯುವ ಅನುಮಾನವಿದೆ. ಅವರ ಯೋಜನೆಗಳಿಗೆ 60 ರಿಂದ 70 ಸಾವಿರ ಕೋಟಿ ರೂ. ಬೇಕು. ಅವರು ಎಲ್ಲಿಂದ ಅನುದಾನ ತರುತ್ತಾರೆ. ಇನ್ನೂ ರಸ್ತೆ, ನೀರಾವರಿ ಸೇರಿದಂತೆ ಹಲವು ಕಾರ್ಯಕ್ರಮಗಳ ವೇಗ ಯಾವ ರೀತಿ ಹಣ ಹೊಂದಿಸುತ್ತಾರೆ. ಇವರ ಅಭಿವೃದ್ದಿ ಹೇಗೆ ಇರಲಿದೆ ಕಾದು ನೋಡಿ, ದೊಡ್ಡ ಅಭಿವೃದ್ಧಿ ಕಾರ್ಯಗಳು ಈ ಸರ್ಕಾರದಲ್ಲಿ ನಡೆಯುತ್ತದೆ ಎಂದು ಯಾವುದೇ ಕಾರಣಕ್ಕೂ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದರು.
ಜೆಡಿಎಸ್ ಈ ಬಾರಿ 60 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕಿತ್ತು. ಆದರೆ, ಕೆಲವರ ಪಿತೂರಿ ಮತ್ತು ಸುಳ್ಳು ಆರೋಪಗಳಿಂದ ಎರಡು ಮೂರು ಸಮಾಜದ ಮತಗಳು ನಮ್ಮ ಪಕ್ಷಕ್ಕೆ ಬರಲಿಲ್ಲ. ಜೆಡಿಎಸ್ ಬಿಜೆಪಿ ಜೊತೆ ಹೋಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಬಿಜೆಪಿ ರಾಷ್ಟ್ರೀಯ ನಾಯಕರು ಏನೇನು ಮಾಡಿದ್ದಾರೆ ಗೊತ್ತು, ನಮ್ಮನ್ನು ಮುಗಿಸಲು ಹೋಗಿ ಇದೀಗ ಅವರೇ ಮುಗಿದಿದ್ದಾರೆ. ನಮ್ಮ ಕುಟುಂಬ ಇದಕ್ಕಿಂತ ಹೆಚ್ಚಿನ ಆಘಾತವನ್ನು ಎದುರಿಸಿ ನಂತರ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೇವೆ. ದೇವರ ಹಾಗೂ ಜನರ ಅನುಗ್ರಹ ನಮ್ಮ ಪಕ್ಷದ ಮೇಲಿದ್ದು, ಸೋಲಿ ಗೆಲ್ಲಲಿ ಸಂಘಟನೆ ಮುಂದುವರೆಸಲಿದ್ದೇವೆ. ಮುಂದೆ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಯುವಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…