ನವೆಂಬರ್ 1 ರಿಂದ ನಗರಾದ್ಯಾಂತ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕಡ್ಡಾಯ : ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ದಿನದಿಂದ ಬಿಬಿಎಂಪಿ ವ್ಯಾಪ್ತಿಯ ಉದ್ದಿಮೆ, ಮಾಲ್, ಹೋಟೆಲ್ ಮಳಿಗೆಗಳು ಸೇರಿದಂತೆ ಎಲ್ಲ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೌತಮ್ ಕುಮಾರ್, ನವೆಂಬರ್ 1 ರಿಂದ ನಗರಾದ್ಯಾಂತ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು, ಒಂದು ವೇಳೆ ಕನ್ನಡ ನಾಮಫಲಕ ಹಾಕದ ಮಳಿಗೆಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನವೆಂಬರ್ ತಿಂಗಳಾದ್ಯಂತ ಬೆಂಗಳೂರು ನಗರದಲ್ಲಿರುವ ಎಲ್ಲ ಮಳಿಗೆಗಳ ಮೇಲೆ ಕನ್ನಡ ನಾಮಫಲಕ ಹಾಕಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಬಿಎಂಪಿ ಸಿದ್ದಪಡಿಸಿದ ಹೊಸ ಹೊರಾಂಗಣ ಮತ್ತು ಸಾರ್ವಜನಿಕ ಸಂದೇಶ ನಾಮಫಲಕದಲ್ಲಿ ಶೇ. 60 ರಷ್ಟು ಜಾಗದಲ್ಲಿ ಕನ್ನಡ ಕಡ್ಡಾಯ ನಿಯಮ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.