Featured

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ  – Vishwanews24

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ

ಮಂಗಳೂರು : ಕರಾವಳಿಯ ನೆಚ್ಚಿನ ಜಾನಪದ ಕ್ರಿಡೆ ಕಂಬಳದ ಋತು ಈ ಬಾರಿ ಮತ್ತೆ ಮುಂದೂಡಿಕೆಯಾಗಿದ್ದು, ಇದೇ ವಾರ ಶಿರ್ವದಲ್ಲಿ ಜೋಡುಕರೆ ಕಂಬಳ ವಿಧ್ಯುಕ್ತವಾಗಿ ಆರಂಭಗೊಳ್ಳಬೇಕಿತ್ತು. ವೇಳಾಪಟ್ಟಿ ಮತ್ತೆ ಬದಲಾವಣೆ ಕಂಡಿದ್ದು, ನವೆಂಬರ್ 26ರಂದು ಕಕ್ಯಪದವು ಸತ್ಯಧರ್ಮ ಜೋಡುಕರೆ ಕಂಬಳದೊಂದಿಗೆ ಈ ಸಾಲಿನ ಕಂಬಳಗಳಿಗೆ ಚಾಲನೆ ದೊರಕಲಿದೆ.

ಈ ಋತುವಿನ ಮೊದಲ ಮೂರು ಕಂಬಳಗಳಾದ ನವೆಂಬರ್ 5- ಶಿರ್ವ, ನವೆಂಬರ್ 12- ಪಿಲಿಕುಳ, ನವೆಂಬರ್ 19- ಪಜೀರು ಮುಂದೂಡಲ್ಪಟ್ಟಿರುವುದರಿಂದ ಕಂಬಳ ಆರಂಭ ಮೂರು ವಾರ ವಿಳಂಬವಾಗಲಿದೆ. ಇದರೊಂದಿಗೆ ಒಟ್ಟು ಕಂಬಳಗಳ ಸಂಖ್ಯೆ 24ರಿಂದ 21ಕ್ಕೆ ಇಳಿಕೆಯಾಗಲಿದೆ. ಸಾಂಪ್ರದಾಯಿಕ ಕಂಬಳವಾಗಿರುವ ಶಿರ್ವ ಕಂಬಳ ಹಗಲು ಮಾತ್ರ ನಡೆಯುತ್ತದೆ. ಈ ಬಾರಿ ಗದ್ದೆಯಲ್ಲಿ ಭತ್ತ ನಾಟಿ ವಿಳಂಬವಾಗಿ, ಮಳೆಯ ನಡುವೆ ಕಟಾವು ಇನ್ನಷ್ಟೇ ನಡೆಯಬೇಕಿರುವುದರಿಂದ ಶಿರ್ವ ಕಂಬಳವನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಡಿಸೆಂಬರ್ 13ರಂದು ಮಂಗಳವಾರ ನಡೆಯಲಿದೆ.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ..

ನವೆಂಬರ್ 19ರಂದು ನಿಗದಿಯಾಗಿದ್ದ ಪಜೀರು ಕಂಬಳ ಕರೆಗೆ ಮೊನ್ನೆಯಷ್ಟೇ ಶಿಲಾನ್ಯಾಸ ನಡೆದಿದೆ. ಕರೆ ಇನ್ನಷ್ಟೇ ಸಿದ್ಧವಾಗಬೇಕಿರುವುದರಿಂದ ಹೊಸ ದಿನಾಂಕ ನೀಡಲಾಗಿಲ್ಲ. ಕಂಬಳ ಸಮಿತಿಯು ಪಿಲಿಕುಳ ಕಂಬಳಕ್ಕೆ ನ.12ರ ದಿನಾಂಕ ನೀಡಿತ್ತು. ಆದರೆ ಕರೆ ಸಿದ್ಧತೆ ಕೆಲಸವೇ ಆರಂಭಗೊಂಡಿಲ್ಲ. ಈ ನಡುವೆ, ‘ಈ ಬಾರಿ ಕಂಬಳ ಮಾಡೋಣ’ ಎಂದು ಆಸಕ್ತಿ ತೋರಿಸಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆಗೊಂಡಿದ್ದಾರೆ. ಹೊಸ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಇನ್ನಷ್ಟೇ ಅಧಿಕಾರ ವಹಿಸಿಕೊಳ್ಳಬೇಕಿದೆ. ಹೀಗಾಗಿ ಪಿಲಿಕುಳದಲ್ಲಿ ಈ ಬಾರಿಯೂ ಕಂಬಳ ನಡೆಯುವ ಸಾಧ್ಯತೆ ಗೋಚರಿಸುತ್ತಿಲ್ಲ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago