ಮಂಗಳೂರು : ಕರಾವಳಿಯ ನೆಚ್ಚಿನ ಜಾನಪದ ಕ್ರಿಡೆ ಕಂಬಳದ ಋತು ಈ ಬಾರಿ ಮತ್ತೆ ಮುಂದೂಡಿಕೆಯಾಗಿದ್ದು, ಇದೇ ವಾರ ಶಿರ್ವದಲ್ಲಿ ಜೋಡುಕರೆ ಕಂಬಳ ವಿಧ್ಯುಕ್ತವಾಗಿ ಆರಂಭಗೊಳ್ಳಬೇಕಿತ್ತು. ವೇಳಾಪಟ್ಟಿ ಮತ್ತೆ ಬದಲಾವಣೆ ಕಂಡಿದ್ದು, ನವೆಂಬರ್ 26ರಂದು ಕಕ್ಯಪದವು ಸತ್ಯಧರ್ಮ ಜೋಡುಕರೆ ಕಂಬಳದೊಂದಿಗೆ ಈ ಸಾಲಿನ ಕಂಬಳಗಳಿಗೆ ಚಾಲನೆ ದೊರಕಲಿದೆ.
ಈ ಋತುವಿನ ಮೊದಲ ಮೂರು ಕಂಬಳಗಳಾದ ನವೆಂಬರ್ 5- ಶಿರ್ವ, ನವೆಂಬರ್ 12- ಪಿಲಿಕುಳ, ನವೆಂಬರ್ 19- ಪಜೀರು ಮುಂದೂಡಲ್ಪಟ್ಟಿರುವುದರಿಂದ ಕಂಬಳ ಆರಂಭ ಮೂರು ವಾರ ವಿಳಂಬವಾಗಲಿದೆ. ಇದರೊಂದಿಗೆ ಒಟ್ಟು ಕಂಬಳಗಳ ಸಂಖ್ಯೆ 24ರಿಂದ 21ಕ್ಕೆ ಇಳಿಕೆಯಾಗಲಿದೆ. ಸಾಂಪ್ರದಾಯಿಕ ಕಂಬಳವಾಗಿರುವ ಶಿರ್ವ ಕಂಬಳ ಹಗಲು ಮಾತ್ರ ನಡೆಯುತ್ತದೆ. ಈ ಬಾರಿ ಗದ್ದೆಯಲ್ಲಿ ಭತ್ತ ನಾಟಿ ವಿಳಂಬವಾಗಿ, ಮಳೆಯ ನಡುವೆ ಕಟಾವು ಇನ್ನಷ್ಟೇ ನಡೆಯಬೇಕಿರುವುದರಿಂದ ಶಿರ್ವ ಕಂಬಳವನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಡಿಸೆಂಬರ್ 13ರಂದು ಮಂಗಳವಾರ ನಡೆಯಲಿದೆ.
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ..
ನವೆಂಬರ್ 19ರಂದು ನಿಗದಿಯಾಗಿದ್ದ ಪಜೀರು ಕಂಬಳ ಕರೆಗೆ ಮೊನ್ನೆಯಷ್ಟೇ ಶಿಲಾನ್ಯಾಸ ನಡೆದಿದೆ. ಕರೆ ಇನ್ನಷ್ಟೇ ಸಿದ್ಧವಾಗಬೇಕಿರುವುದರಿಂದ ಹೊಸ ದಿನಾಂಕ ನೀಡಲಾಗಿಲ್ಲ. ಕಂಬಳ ಸಮಿತಿಯು ಪಿಲಿಕುಳ ಕಂಬಳಕ್ಕೆ ನ.12ರ ದಿನಾಂಕ ನೀಡಿತ್ತು. ಆದರೆ ಕರೆ ಸಿದ್ಧತೆ ಕೆಲಸವೇ ಆರಂಭಗೊಂಡಿಲ್ಲ. ಈ ನಡುವೆ, ‘ಈ ಬಾರಿ ಕಂಬಳ ಮಾಡೋಣ’ ಎಂದು ಆಸಕ್ತಿ ತೋರಿಸಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆಗೊಂಡಿದ್ದಾರೆ. ಹೊಸ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಇನ್ನಷ್ಟೇ ಅಧಿಕಾರ ವಹಿಸಿಕೊಳ್ಳಬೇಕಿದೆ. ಹೀಗಾಗಿ ಪಿಲಿಕುಳದಲ್ಲಿ ಈ ಬಾರಿಯೂ ಕಂಬಳ ನಡೆಯುವ ಸಾಧ್ಯತೆ ಗೋಚರಿಸುತ್ತಿಲ್ಲ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…