Featured

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ  – Vishwanews24

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ

ಮಂಗಳೂರು : ಕರಾವಳಿಯ ನೆಚ್ಚಿನ ಜಾನಪದ ಕ್ರಿಡೆ ಕಂಬಳದ ಋತು ಈ ಬಾರಿ ಮತ್ತೆ ಮುಂದೂಡಿಕೆಯಾಗಿದ್ದು, ಇದೇ ವಾರ ಶಿರ್ವದಲ್ಲಿ ಜೋಡುಕರೆ ಕಂಬಳ ವಿಧ್ಯುಕ್ತವಾಗಿ ಆರಂಭಗೊಳ್ಳಬೇಕಿತ್ತು. ವೇಳಾಪಟ್ಟಿ ಮತ್ತೆ ಬದಲಾವಣೆ ಕಂಡಿದ್ದು, ನವೆಂಬರ್ 26ರಂದು ಕಕ್ಯಪದವು ಸತ್ಯಧರ್ಮ ಜೋಡುಕರೆ ಕಂಬಳದೊಂದಿಗೆ ಈ ಸಾಲಿನ ಕಂಬಳಗಳಿಗೆ ಚಾಲನೆ ದೊರಕಲಿದೆ.

ಈ ಋತುವಿನ ಮೊದಲ ಮೂರು ಕಂಬಳಗಳಾದ ನವೆಂಬರ್ 5- ಶಿರ್ವ, ನವೆಂಬರ್ 12- ಪಿಲಿಕುಳ, ನವೆಂಬರ್ 19- ಪಜೀರು ಮುಂದೂಡಲ್ಪಟ್ಟಿರುವುದರಿಂದ ಕಂಬಳ ಆರಂಭ ಮೂರು ವಾರ ವಿಳಂಬವಾಗಲಿದೆ. ಇದರೊಂದಿಗೆ ಒಟ್ಟು ಕಂಬಳಗಳ ಸಂಖ್ಯೆ 24ರಿಂದ 21ಕ್ಕೆ ಇಳಿಕೆಯಾಗಲಿದೆ. ಸಾಂಪ್ರದಾಯಿಕ ಕಂಬಳವಾಗಿರುವ ಶಿರ್ವ ಕಂಬಳ ಹಗಲು ಮಾತ್ರ ನಡೆಯುತ್ತದೆ. ಈ ಬಾರಿ ಗದ್ದೆಯಲ್ಲಿ ಭತ್ತ ನಾಟಿ ವಿಳಂಬವಾಗಿ, ಮಳೆಯ ನಡುವೆ ಕಟಾವು ಇನ್ನಷ್ಟೇ ನಡೆಯಬೇಕಿರುವುದರಿಂದ ಶಿರ್ವ ಕಂಬಳವನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಡಿಸೆಂಬರ್ 13ರಂದು ಮಂಗಳವಾರ ನಡೆಯಲಿದೆ.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ..

ನವೆಂಬರ್ 19ರಂದು ನಿಗದಿಯಾಗಿದ್ದ ಪಜೀರು ಕಂಬಳ ಕರೆಗೆ ಮೊನ್ನೆಯಷ್ಟೇ ಶಿಲಾನ್ಯಾಸ ನಡೆದಿದೆ. ಕರೆ ಇನ್ನಷ್ಟೇ ಸಿದ್ಧವಾಗಬೇಕಿರುವುದರಿಂದ ಹೊಸ ದಿನಾಂಕ ನೀಡಲಾಗಿಲ್ಲ. ಕಂಬಳ ಸಮಿತಿಯು ಪಿಲಿಕುಳ ಕಂಬಳಕ್ಕೆ ನ.12ರ ದಿನಾಂಕ ನೀಡಿತ್ತು. ಆದರೆ ಕರೆ ಸಿದ್ಧತೆ ಕೆಲಸವೇ ಆರಂಭಗೊಂಡಿಲ್ಲ. ಈ ನಡುವೆ, ‘ಈ ಬಾರಿ ಕಂಬಳ ಮಾಡೋಣ’ ಎಂದು ಆಸಕ್ತಿ ತೋರಿಸಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆಗೊಂಡಿದ್ದಾರೆ. ಹೊಸ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಇನ್ನಷ್ಟೇ ಅಧಿಕಾರ ವಹಿಸಿಕೊಳ್ಳಬೇಕಿದೆ. ಹೀಗಾಗಿ ಪಿಲಿಕುಳದಲ್ಲಿ ಈ ಬಾರಿಯೂ ಕಂಬಳ ನಡೆಯುವ ಸಾಧ್ಯತೆ ಗೋಚರಿಸುತ್ತಿಲ್ಲ.

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 seconds ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago