Featured

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ  – Vishwanews24

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ

ಮಂಗಳೂರು : ಕರಾವಳಿಯ ನೆಚ್ಚಿನ ಜಾನಪದ ಕ್ರಿಡೆ ಕಂಬಳದ ಋತು ಈ ಬಾರಿ ಮತ್ತೆ ಮುಂದೂಡಿಕೆಯಾಗಿದ್ದು, ಇದೇ ವಾರ ಶಿರ್ವದಲ್ಲಿ ಜೋಡುಕರೆ ಕಂಬಳ ವಿಧ್ಯುಕ್ತವಾಗಿ ಆರಂಭಗೊಳ್ಳಬೇಕಿತ್ತು. ವೇಳಾಪಟ್ಟಿ ಮತ್ತೆ ಬದಲಾವಣೆ ಕಂಡಿದ್ದು, ನವೆಂಬರ್ 26ರಂದು ಕಕ್ಯಪದವು ಸತ್ಯಧರ್ಮ ಜೋಡುಕರೆ ಕಂಬಳದೊಂದಿಗೆ ಈ ಸಾಲಿನ ಕಂಬಳಗಳಿಗೆ ಚಾಲನೆ ದೊರಕಲಿದೆ.

ಈ ಋತುವಿನ ಮೊದಲ ಮೂರು ಕಂಬಳಗಳಾದ ನವೆಂಬರ್ 5- ಶಿರ್ವ, ನವೆಂಬರ್ 12- ಪಿಲಿಕುಳ, ನವೆಂಬರ್ 19- ಪಜೀರು ಮುಂದೂಡಲ್ಪಟ್ಟಿರುವುದರಿಂದ ಕಂಬಳ ಆರಂಭ ಮೂರು ವಾರ ವಿಳಂಬವಾಗಲಿದೆ. ಇದರೊಂದಿಗೆ ಒಟ್ಟು ಕಂಬಳಗಳ ಸಂಖ್ಯೆ 24ರಿಂದ 21ಕ್ಕೆ ಇಳಿಕೆಯಾಗಲಿದೆ. ಸಾಂಪ್ರದಾಯಿಕ ಕಂಬಳವಾಗಿರುವ ಶಿರ್ವ ಕಂಬಳ ಹಗಲು ಮಾತ್ರ ನಡೆಯುತ್ತದೆ. ಈ ಬಾರಿ ಗದ್ದೆಯಲ್ಲಿ ಭತ್ತ ನಾಟಿ ವಿಳಂಬವಾಗಿ, ಮಳೆಯ ನಡುವೆ ಕಟಾವು ಇನ್ನಷ್ಟೇ ನಡೆಯಬೇಕಿರುವುದರಿಂದ ಶಿರ್ವ ಕಂಬಳವನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಡಿಸೆಂಬರ್ 13ರಂದು ಮಂಗಳವಾರ ನಡೆಯಲಿದೆ.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ..

ನವೆಂಬರ್ 19ರಂದು ನಿಗದಿಯಾಗಿದ್ದ ಪಜೀರು ಕಂಬಳ ಕರೆಗೆ ಮೊನ್ನೆಯಷ್ಟೇ ಶಿಲಾನ್ಯಾಸ ನಡೆದಿದೆ. ಕರೆ ಇನ್ನಷ್ಟೇ ಸಿದ್ಧವಾಗಬೇಕಿರುವುದರಿಂದ ಹೊಸ ದಿನಾಂಕ ನೀಡಲಾಗಿಲ್ಲ. ಕಂಬಳ ಸಮಿತಿಯು ಪಿಲಿಕುಳ ಕಂಬಳಕ್ಕೆ ನ.12ರ ದಿನಾಂಕ ನೀಡಿತ್ತು. ಆದರೆ ಕರೆ ಸಿದ್ಧತೆ ಕೆಲಸವೇ ಆರಂಭಗೊಂಡಿಲ್ಲ. ಈ ನಡುವೆ, ‘ಈ ಬಾರಿ ಕಂಬಳ ಮಾಡೋಣ’ ಎಂದು ಆಸಕ್ತಿ ತೋರಿಸಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆಗೊಂಡಿದ್ದಾರೆ. ಹೊಸ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಇನ್ನಷ್ಟೇ ಅಧಿಕಾರ ವಹಿಸಿಕೊಳ್ಳಬೇಕಿದೆ. ಹೀಗಾಗಿ ಪಿಲಿಕುಳದಲ್ಲಿ ಈ ಬಾರಿಯೂ ಕಂಬಳ ನಡೆಯುವ ಸಾಧ್ಯತೆ ಗೋಚರಿಸುತ್ತಿಲ್ಲ.

Vishwa News 24

Recent Posts

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

26 minutes ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

30 minutes ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

38 minutes ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

44 minutes ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago