ಬೆಂಗಳೂರು: ‘ಮನೆ ಬಾಗಿಲಿಗೇ ಮಾಸಾಶನ’ ಅಭಿಯಾನದ ಮೂಲಕ ಫಲಾನುಭವಿಗಳ ಮನೆಗೆ ಪಿಂಚಣಿ ತಲುಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಅರ್ಹ ಫಲಾನುಭವಿಗಳನ್ನು ‘ನವೋದಯ’ ಆ್ಯಪ್ ಮತ್ತು ತಂತ್ರಾಂಶದಲ್ಲಿ ಗುರುತಿಸಿ, ಅವರ ಮನೆ ಬಾಗಿಲಲ್ಲೇ ಪಿಂಚಣಿ ಮಂಜೂರಾತಿ ಮಾಡುವ ಅಭಿಯಾನಕ್ಕೆ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಮಧ್ಯವರ್ತಿಗಳ ಹಾವಳಿ ಇಲ್ಲದೆ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು. ಇದು ಪ್ರಧಾನಿ ನರೇಂದ್ರ ಮೋದಿಯವರ ಆಶಯ ಕೂಡ. ಇಷ್ಟು ದಿನ ಪಿಂಚಣಿಗಾಗಿ ಫಲಾನುಭವಿಗಳು ತುಂಬಾ ಕಷ್ಟ ಪಡುತ್ತಿದ್ದರು. ಇದೀಗ ಅದನ್ನು ತಪ್ಪಿಸಲು ಸರ್ಕಾರ ಮಹತ್ವದ ಯೋಜನೆ ಜಾರಿ ಮಾಡಿದೆ’ ಎಂದರು.
‘ಪಿಂಚಣಿಗಾಗಿ ಜನರು ಸರ್ಕಾರಿ ಕಚೇರಿಗೆ ಹೋಗಿ, ಅಧಿಕಾರಿಗಳ ಬಳಿ ಕೈ ಕಟ್ಟಿ ನಿಲ್ಲುವ ಪರಿಸ್ಥಿತಿ ಇತ್ತು. ಅದೆಲ್ಲವನ್ನೂ ತಪ್ಪಿಸಲುಈ ಯೋಜನೆ ಸಹಕಾರಿಯಾಗಲಿದೆ. ಇನ್ನು ಮುಂದೆ ಮಧ್ಯವರ್ತಿಗಳು ಇಲ್ಲದೇ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೇರವಾಗಿ ಅವರ ಬ್ಯಾಂಕ್ ಖಾತೆಗೆ ತಲುಪಲಿದೆ’ ಎಂದರು.
‘ಮೊದಲ ಹಂತದಲ್ಲಿ ವೃದ್ಧಾಪ್ಯ ವರ್ಗಕ್ಕೆ ಯೋಜನೆ ಜಾರಿ ಮಾಡಲಾಗಿದೆ. ಎರಡನೇ ಹಂತದಲ್ಲಿ ವಿಧವೆಯರು, ಅಂಗವಿಕಲರು ಸೇರಿದಂತೆ ಉಳಿದ ಎಲ್ಲ ಪಿಂಚಣಿದಾರರಿಗೆ ಜಾರಿ ಮಾಡಲು ಕ್ರಮ ವಹಿಸುತ್ತೇವೆ’ ಎಂದರು.
ನಿಜವಾದ ರೈತರು ಹಿಂಸಾಚಾರ ನಡೆಸಲು ಸಾಧ್ಯವಿಲ್ಲ : ಶೋಭಾ ಕರಂದ್ಲಾಜೆ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]