Featured

ನವ ದುರ್ಗೆಯರ ಶಕ್ತಿ ಮುಂದಿನ 9 ವರ್ಷ ನಮ್ಮ ಸರ್ಕಾರದ ಮೇಲೆ ಇರುತ್ತದೆ ಎಂಬುದು ನನ್ನ ನಂಬಿಕೆ : ಡಿ.ಕೆ.ಶಿವಕುಮಾರ್ – vishwanews24

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ : ಡಿ.ಕೆ.ಶಿವಕುಮಾರ್

ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು “ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌. ಅದರಂತೆ ಉತ್ತಮ ಮಳೆ ಬಂದು ನಾನು ಮತ್ತು ಮುಖ್ಯಮಂತ್ರಿ ಇಬ್ಬರೂ ರಾಜ್ಯದ ನಾಲ್ಕು ಅಣೆಕಟ್ಟುಗಳಿಗೆ ಬಾಗಿನ ಅರ್ಪಿಸಿದ್ದೇವೆ” ಎಂದರು.

ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಬಂದು ಕಳೆದ ವರ್ಷ ದೇವಿಗೆ ಗೃಹಲಕ್ಷ್ಮಿ ಹಣದ 2 ಸಾವಿರ ಹಾಗೂ ಒಂದು ವರ್ಷದ ಹಣವನ್ನು ಕಾಣಿಕೆ ಸಲ್ಲಿಸಿದ್ದೆವು.” ಎಂದು ಹೇಳಿದರು. ಕಳೆದ ವರ್ಷ ನಾಡಿನ ಸಾಂಸ್ಕೃತಿಕ ಹೆಗ್ಗುರುತು ಹಂಸಲೇಖ ಅವರಿಂದ ಉದ್ಘಾಟನೆ ನೆರವೇರಿಸಲಾಗಿತ್ತು. ಈ ವರ್ಷ ಸಾಹಿತ್ಯ ಲೋಕದ ಪೈಲ್ವಾನ್ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ ನೆರವೇರಿಸಿರುವುದು ಹೆಚ್ಚು ಸಂತಸ ನೀಡಿದೆ” ಎಂದು ಹೇಳಿದರು.

ನವರಾತ್ರಿ ಎಂದರೆ ಒಂಬತ್ತು ದಿನ. ಈ ಒಂಬತ್ತು ದಿನವೂ ದೇವಿಯ ನಾನಾ ಅವತಾರಗಳನ್ನು ಪೂಜೆ ಮಾಡುತ್ತೇವೆ. ನವ ದುರ್ಗೆಯರ ಶಕ್ತಿ ಮುಂದಿನ 9 ವರ್ಷಗಳ ನಮ್ಮ ಸರ್ಕಾರದ ಮೇಲೆ ಇರುತ್ತದೆ ಎಂಬುದು ನನ್ನ ಅಚಲ ನಂಬಿಕೆ” ಎಂದರು.

ಮೈಸೂರಿನಲ್ಲಿ ಚಾಮುಂಡೇಶ್ವರಿ, ಉತ್ತರ ಕರ್ನಾಟಕದಲ್ಲಿ ಬನಶಂಕರಿ, ಕರಾವಳಿಯಲ್ಲಿ ದುರ್ಗಾಪರಮೇಶ್ವರಿ, ಮಲೆನಾಡಿನಲ್ಲಿ ಸಿಗಂದೂರೇಶ್ವರಿ, ಬೆಂಗಳೂರಿನಲ್ಲಿ ಅಣ್ಣಮ್ಮ , ನಮ್ಮ ಊರಿನಲ್ಲಿ ಕೆಂಕೇರಮ್ಮ, ಕಬ್ಬಾಳಮ್ಮ ಹೀಗೆ ರಾಜ್ಯದ ಅಷ್ಟ ದಿಕ್ಕುಗಳಲ್ಲೂ ನೆಲೆಸಿರುವ ತಾಯಂದಿರು ನಮ್ಮನ್ನು ಕಾಪಾಡುತ್ತಿದ್ದಾರೆ ಎಂದು ಹೇಳಿದರು.

ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನೆಪು ಜ್ಞಾನದ ಮೂಲ, ದೇವರ ದಸರಾ ಶಕ್ತಿ ಹಬ್ಬ, ವಿಜಯದ ಹಬ್ಬ, ಕರ್ನಾಟಕದ ಸಂಸ್ಕೃತಿ ಸಾರುವ ಹಬ್ಬ. ಭಕ್ತಿಯ ಮೂಲ ಇವೆಲ್ಲಾ ಮನುಷ್ಯತ್ವಕ್ಕೆ ಮೂಲ. ಮನುಷ್ಯತ್ವ ಮೋಕ್ಷಕ್ಕೆ ಮೂಲ. ದಸರಾ ಶಕ್ತಿ ಹಬ್ಬ, ವಿಜಯದ ಹಬ್ಬ, ಕರ್ನಾಟಕದ ಸಂಸ್ಕೃತಿ ಸಾರುವ ಹಬ್ಬ” ಎಂದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago