ಮಂಗಳೂರು: ಮಂಗಳೂರು ವಿದೇಶಿ ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ, ಒಂದೇ ವಾರದಲ್ಲಿ ವಿದೇಶದ ಪ್ರವಾಸಿಗರನ್ನು ಹೊತ್ತ 2 ನೇ ಬೃಹತ್ ಹಡಗು ಕರ್ನಾಟಕ ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವಮಗಳೂರು ಬಂದರಿಗೆ ಆಗಮಿಸಿದೆ.
ಪ್ರಸಕ್ತ ಋತುವಿನ ಎರಡನೇ ಕ್ರೂಸ್ ಹಡಗು ‘ಸೆವೆನ್ ಸೀಸ್ ಎಕ್ಸ್ಪ್ಲೋರರ್’ನ ಪ್ರವಾಸಿಗರನ್ನು ಮತ್ತು ಸಿಬಂದಿ ವರ್ಗವನ್ನು ಎನ್ಎಂಪಿಎ ಮತ್ತು ಎಂಪಿಎ ಅಧ್ಯಕ್ಷ ಡಾ. ಎ.ವಿ. ರಮಣ ಅವರು ಬಂದರಿಗೆ ಆತ್ಮೀಯವಾಗಿ ಸ್ವಾಗತಿಸಿದರು.
ಈ ಐಶರಾಮಿ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿಗಳು ಇದ್ದಾರೆ.
ಪ್ರವಾಸಿಗರು ಮಂಗಳೂರು ಮತ್ತು ಸುತ್ತಮುತ್ತಲಿನ ವಿವಿಧ ಪ್ರವಾಸಿ ತಾಣಗಳಾದ ಸೇಂಟ್ ಅಲೋಶಿಯಸ್, ಕದ್ರಿ ದೇವಸ್ಥಾನ, ಕುದ್ರೋಳಿ ದೇವಸ್ಥಾನ, ಸ್ಥಳೀಯ ಮಾರುಕಟ್ಟೆ, ಗೋಡಂಬಿ ಕಾರ್ಖಾನೆ, ಕಾರ್ಕಳ ಗೋಮಟೇಶ್ವರ ಪ್ರತಿಮೆ, ಮೂಡಬಿದ್ರಿ ಸಾವಿರ ಕಂಬದ ಬಸದಿ, ಸೇಂಟ್ ಅಲೋಶಿಯಸ್ ಚಾಪೆಲ್ ಮತ್ತು ಫೋರಂ ಫಿಜಾ ಮಾಲ್ ಗೆ ಭೇಟಿ ನೀಡಿದರು.
ಪ್ರವಾಸಿಗರಿಗೆ ಕರಾವಳಿಯ ಯಕ್ಷಗಾನ ಮತ್ತು ಸಾಂಪ್ರದಾಯಿಕ ಡೋಲು (ಚಂಡೆ) ಮುಂತಾದ ಸಾಂಪ್ರದಾಯಿಕ ಜಾನಪದದ ಶೈಲಿಯಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು.
ಕ್ರೂಸ್ ಪ್ರಯಾಣಿಕರ ಸೌಕರ್ಯ ಮತ್ತು ಉತ್ತಮ ಅನುಭವಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಕ್ಷಿಪ್ರ ಸಂಚಾರಕ್ಕಾಗಿ ವಲಸೆ ಮತ್ತು ಕಸ್ಟಮ್ಸ್ ಕೌಂಟರ್ಗಳು, ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಅಂಗಡಿಗಳು, ಸ್ಥಳೀಯ ಮಾರುಕಟ್ಟೆಗೆ ಭೇಟಿ ನೀಡುವ ಪ್ರವಾಸಿಗರಿಗೆ 02 ಶಟಲ್ ಬಸ್ ಸೇರಿದಂತೆ 25 ಕೋಚ್ಗಳು ಮತ್ತು ಟ್ಯಾಕ್ಸಿಗಳು, ಪ್ರವಾಸಿ ವ್ಯಾನ್ಗಳು, ಆಯುಷ್ ಇಲಾಖೆಯಿಂದ ಧ್ಯಾನ ಕೇಂದ್ರವನ್ನು ಸಿದ್ಧಪಡಿಸಲಾಗಿತ್ತು.
ಪ್ರವಾಸಿಗರಿಗೆ ಸ್ಥಳೀಯ ಜಾನಪದ ಮತ್ತು ಪ್ರದೇಶದ ಸಂಪ್ರದಾಯಗಳನ್ನು ಪರಿಚಯಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.
ನೌಕಾಯಾನದ ಪ್ರವಾಸಿಗರು ತಮ್ಮ ಹಡಗಿಗೆ ಮರಳುತ್ತಿರುವಾಗ ಮಂಗಳೂರಿಗೆ ಭೇಟಿ ನೀಡಿದ ಸವಿನೆನಪಿಗಾಗಿ ಬಂದರಿನಿಂದ ಸ್ಮರಣಿಕೆಗಳನ್ನು ನೀಡಲಾಯಿತು.
ಹಡಗು ತನ್ನ ಮುಂದಿನ ತಾಣವಾದ ಮಾಲೆಗೆ ಸಂಜೆ ಆರು ಗಂಟೆ ಸುಮಾರಿಗೆ ಪ್ರಯಾಣ ಬೆಳೆಸಿತು.
ಈ ಐಶಾರಾಮಿ ಕ್ರೂಸ್ ಹಡಗು “ಸೆವೆನ್ ಸೀಸ್ ಎಕ್ಸ್ಪ್ಲೋರರ್” ನ ಒಟ್ಟಾರೆ ಉದ್ದ 223.74 ಮೀಟರ್ ಮತ್ತು 55,254 ಒಟ್ಟು ಟನ್ನೇಜ್ 7 ಮೀಟರ್ Draft ಸಾಮರ್ಥ್ಯವನ್ನು ಹೊಂದಿದೆ.
ಮಾಲ್ಡೀವ್ಸ್ ನ ಮಾಲೆಗೆ ಹೋಗುವ ಮಾರ್ಗದಲ್ಲಿ ಹಡಗು ಕತಾರ್ ಬಂದರಿನಿಂದ ಭಾರತಕ್ಕೆ ಬಂದು ಗೋವಾದ ಮರ್ಮುಗೋವಾ ಬಂದರಿನಲ್ಲಿ ನಿಂತು ಅಲ್ಲಿಂದ ಮಂಗಳೂರಿಗೆ ಆಗಮಿಸಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…