ಪುತ್ತೂರು : ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ರಸ್ತೆಯಲ್ಲಿ ವಾಹನದಡಿಗೆ ಬಿದ್ದು ನಾಗರಹಾವೊಂದು ಸಾವನಪ್ಪಿತ್ತು. ಈ ವಿಚಾರವನ್ನು ಸ್ಥಳೀಯರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಗೆ ತಿಳಿಸಿದ್ದರು. ಹಾವು ಸತ್ತ ತಕ್ಷಣ ಅದಕ್ಕೆ ಅಂತ್ಯಸಂಸ್ಕಾರ ಮಾಡಬೇಕು ಎನ್ನುವ ಪದ್ಧತಿ ಇರುವ ಕಾರಣ ದೇವಳದ ಸಿಬ್ಬಂದಿಗಳಿಗೆ ವಿಚಾರವನ್ನು ಸ್ಥಳೀಯರು ತಿಳಿಸಿದ್ದರು. ಆದರೆ ದೇವಾಲಯದ ಸಿಬ್ಬಂದಿ ಹಾವು ಸತ್ತು ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸದೆ ಅಸಡ್ಡೆ ತೋರಿದ್ದಾರೆ.
ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಸಾವನಪ್ಪಿದ ಹಾವನ್ನು ಸೀದಾ ಕುಕ್ಕೆ ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸರ್ಪಸಂಸ್ಕಾರ ವಿಧಿಗೆ ಹಣ ಕೊಟ್ಟರೆ ಮಾತ್ರ ಅರ್ಚಕರು ಸಿಗುತ್ತಾರೆ, ಆದರೆ ಕ್ಷೇತ್ರದಲ್ಲಿ ಆರಾಧಿಸಲ್ಪಡುವ ನಾಗನೇ ಸತ್ತು ಬಿದ್ದಾಗ ನಿಮಗೆ ಅರ್ಚಕರು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು, ನಾಗದೇವರ ಅನ್ನ ತಿಂದೇ ಇಲ್ಲಿ ಎಲ್ಲರೂ ಬದುಕುತ್ತಿರುವುದು, ಆದರೆ ನಾಗನಿಗೆ ಅಂತ್ಯಸಂಸ್ಕಾರ ನಡೆಸಲು ಮಾತ್ರ ಯಾರೂ ಇಲ್ಲ ಎಂದು ಸಿಬ್ಬಂದಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದೇವಸ್ಥಾನದಲ್ಲಿ ಇಷ್ಟೆಲ್ಲಾ ಸಿಬ್ಬಂದಿಗಳು ಇರೋದು ಯಾಕೆ ಎಂದು ಕ್ಷೇತ್ರದ ಸಿಬ್ಬಂದಿಗಳ ವಿರುದ್ದ ಸ್ಥಳೀಯರು ಹರಿಹಾಯ್ದಿದ್ದಾರೆ.
ಕೊನೆಗೆ ಪುತ್ತೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿದಾಗ ಅವರು ಸ್ಪಂದಿಸಿದ್ದಾರೆ. ಸಹಾಯಕ ಆಯುಕ್ತರ ಆದೇಶದ ಬಳಿಕವೇ ನಾಗನಿಗೆ ಅಂತ್ಯಸಂಸ್ಕಾರ ಅರ್ಚಕರು ನೇರವೇರಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…