Featured

ನಾಗಕ್ಷೇತ್ರ ಕುಕ್ಕೆಯಲ್ಲಿ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ದೊರಕದ ಸ್ಪಂದನೆ  ; ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ – vishwanews24

ನಾಗಕ್ಷೇತ್ರದಲ್ಲಿ ನಾಗನೇ ಸತ್ತು ಬಿದ್ದಾಗ  ಅರ್ಚಕರು ಸಿಗುತ್ತಿಲ್ಲ: ಸಿಬ್ಬಂದಿಗಳ ವಿರುದ್ದ ಆಕ್ರೋಶ

ಪುತ್ತೂರು : ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ರಸ್ತೆಯಲ್ಲಿ ವಾಹನದಡಿಗೆ ಬಿದ್ದು ನಾಗರಹಾವೊಂದು ಸಾವನಪ್ಪಿತ್ತು. ಈ ವಿಚಾರವನ್ನು ಸ್ಥಳೀಯರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಗೆ ತಿಳಿಸಿದ್ದರು. ಹಾವು ಸತ್ತ ತಕ್ಷಣ ಅದಕ್ಕೆ ಅಂತ್ಯಸಂಸ್ಕಾರ ಮಾಡಬೇಕು ಎನ್ನುವ ಪದ್ಧತಿ ಇರುವ ಕಾರಣ ದೇವಳದ ಸಿಬ್ಬಂದಿಗಳಿಗೆ ವಿಚಾರವನ್ನು ಸ್ಥಳೀಯರು ತಿಳಿಸಿದ್ದರು. ಆದರೆ ದೇವಾಲಯದ ಸಿಬ್ಬಂದಿ ಹಾವು ಸತ್ತು ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸದೆ ಅಸಡ್ಡೆ ತೋರಿದ್ದಾರೆ.

ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಸಾವನಪ್ಪಿದ ಹಾವನ್ನು ಸೀದಾ ಕುಕ್ಕೆ ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸರ್ಪಸಂಸ್ಕಾರ ವಿಧಿಗೆ ಹಣ ಕೊಟ್ಟರೆ ಮಾತ್ರ ಅರ್ಚಕರು ಸಿಗುತ್ತಾರೆ, ಆದರೆ ಕ್ಷೇತ್ರದಲ್ಲಿ ಆರಾಧಿಸಲ್ಪಡುವ ನಾಗನೇ ಸತ್ತು ಬಿದ್ದಾಗ ನಿಮಗೆ ಅರ್ಚಕರು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು, ನಾಗದೇವರ ಅನ್ನ ತಿಂದೇ ಇಲ್ಲಿ ಎಲ್ಲರೂ ಬದುಕುತ್ತಿರುವುದು, ಆದರೆ ನಾಗನಿಗೆ ಅಂತ್ಯಸಂಸ್ಕಾರ ನಡೆಸಲು ಮಾತ್ರ ಯಾರೂ ಇಲ್ಲ ಎಂದು ಸಿಬ್ಬಂದಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದೇವಸ್ಥಾನದಲ್ಲಿ ಇಷ್ಟೆಲ್ಲಾ ಸಿಬ್ಬಂದಿಗಳು ಇರೋದು ಯಾಕೆ ಎಂದು ಕ್ಷೇತ್ರದ ಸಿಬ್ಬಂದಿಗಳ ವಿರುದ್ದ ಸ್ಥಳೀಯರು ಹರಿಹಾಯ್ದಿದ್ದಾರೆ.

ಕೊನೆಗೆ ಪುತ್ತೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿದಾಗ ಅವರು ಸ್ಪಂದಿಸಿದ್ದಾರೆ. ಸಹಾಯಕ ಆಯುಕ್ತರ ಆದೇಶದ ಬಳಿಕವೇ ನಾಗನಿಗೆ ಅಂತ್ಯಸಂಸ್ಕಾರ ಅರ್ಚಕರು ನೇರವೇರಿಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago