Featured

ನಾಗಕ್ಷೇತ್ರ ಕುಕ್ಕೆಯಲ್ಲಿ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ದೊರಕದ ಸ್ಪಂದನೆ  ; ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ – vishwanews24

ನಾಗಕ್ಷೇತ್ರದಲ್ಲಿ ನಾಗನೇ ಸತ್ತು ಬಿದ್ದಾಗ  ಅರ್ಚಕರು ಸಿಗುತ್ತಿಲ್ಲ: ಸಿಬ್ಬಂದಿಗಳ ವಿರುದ್ದ ಆಕ್ರೋಶ

ಪುತ್ತೂರು : ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ರಸ್ತೆಯಲ್ಲಿ ವಾಹನದಡಿಗೆ ಬಿದ್ದು ನಾಗರಹಾವೊಂದು ಸಾವನಪ್ಪಿತ್ತು. ಈ ವಿಚಾರವನ್ನು ಸ್ಥಳೀಯರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಗೆ ತಿಳಿಸಿದ್ದರು. ಹಾವು ಸತ್ತ ತಕ್ಷಣ ಅದಕ್ಕೆ ಅಂತ್ಯಸಂಸ್ಕಾರ ಮಾಡಬೇಕು ಎನ್ನುವ ಪದ್ಧತಿ ಇರುವ ಕಾರಣ ದೇವಳದ ಸಿಬ್ಬಂದಿಗಳಿಗೆ ವಿಚಾರವನ್ನು ಸ್ಥಳೀಯರು ತಿಳಿಸಿದ್ದರು. ಆದರೆ ದೇವಾಲಯದ ಸಿಬ್ಬಂದಿ ಹಾವು ಸತ್ತು ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸದೆ ಅಸಡ್ಡೆ ತೋರಿದ್ದಾರೆ.

ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಸಾವನಪ್ಪಿದ ಹಾವನ್ನು ಸೀದಾ ಕುಕ್ಕೆ ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸರ್ಪಸಂಸ್ಕಾರ ವಿಧಿಗೆ ಹಣ ಕೊಟ್ಟರೆ ಮಾತ್ರ ಅರ್ಚಕರು ಸಿಗುತ್ತಾರೆ, ಆದರೆ ಕ್ಷೇತ್ರದಲ್ಲಿ ಆರಾಧಿಸಲ್ಪಡುವ ನಾಗನೇ ಸತ್ತು ಬಿದ್ದಾಗ ನಿಮಗೆ ಅರ್ಚಕರು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು, ನಾಗದೇವರ ಅನ್ನ ತಿಂದೇ ಇಲ್ಲಿ ಎಲ್ಲರೂ ಬದುಕುತ್ತಿರುವುದು, ಆದರೆ ನಾಗನಿಗೆ ಅಂತ್ಯಸಂಸ್ಕಾರ ನಡೆಸಲು ಮಾತ್ರ ಯಾರೂ ಇಲ್ಲ ಎಂದು ಸಿಬ್ಬಂದಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದೇವಸ್ಥಾನದಲ್ಲಿ ಇಷ್ಟೆಲ್ಲಾ ಸಿಬ್ಬಂದಿಗಳು ಇರೋದು ಯಾಕೆ ಎಂದು ಕ್ಷೇತ್ರದ ಸಿಬ್ಬಂದಿಗಳ ವಿರುದ್ದ ಸ್ಥಳೀಯರು ಹರಿಹಾಯ್ದಿದ್ದಾರೆ.

ಕೊನೆಗೆ ಪುತ್ತೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿದಾಗ ಅವರು ಸ್ಪಂದಿಸಿದ್ದಾರೆ. ಸಹಾಯಕ ಆಯುಕ್ತರ ಆದೇಶದ ಬಳಿಕವೇ ನಾಗನಿಗೆ ಅಂತ್ಯಸಂಸ್ಕಾರ ಅರ್ಚಕರು ನೇರವೇರಿಸಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago